Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಂಟ' ಸಿನಿಮಾ ನೋಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಕನ್ನಡ ಚಿತ್ರವನ್ನ ವೀಕ್ಷಿಸಿದ್ದಾರೆ. ಹೆಚ್.ಎಂ.ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ಅಭಿನಯದ 'ಪಂಟ' ಚಿತ್ರವನ್ನ ಸಿಎಂ ಸಾಹೇಬ್ರು ನೋಡಿ ಕಣ್ತುಂಬಿಕೊಂಡಿದ್ದಾರೆ.
ಅನೂಪ್ ರೇವಣ್ಣ ಅಭಿನಯದ 'ಪಂಟ' ಸಿನಿಮಾ ಇಂದು (ಜೂನ್ 23) ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಆದ್ರೆ, ಒಂದು ದಿನ ಮುಂಚೆಯೇ ಸಿಎಂಗೆ ಸಿನಿಮಾ ತೋರಿಸಲಾಗಿದೆ. ನಿನ್ನೆ (ಜೂನ್ 22) ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರೇಣುಕಾಂಬ ಚಿತ್ರಮಂದಿರದಲ್ಲಿ ಸಿದ್ದರಾಮಯ್ಯ ಅವರು 'ಪಂಟ' ನೋಡಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್, ಹೆಚ್.ಎಂ ರೇವಣ್ಣ ಮತ್ತು ಚಿತ್ರತಂಡ ಭಾಗಿಯಾಗಿತ್ತು.
ವಿಶೇಷ ಅಂದ್ರೆ, 'ಪಂಟ' ಚಿತ್ರವನ್ನ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲಾಂಚ್ ಮಾಡಿದ್ದರು. ಕಳೆದ ವರ್ಷ ಕಂಠೀರವ ಸ್ಟುಡಿಯೋದಲ್ಲಿ 'ಪಂಟ' ಸಿನಿಮಾ ಸೆಟ್ಟೇರಿತ್ತು.
ಕಲಾ ಸಾಮ್ರಾಟ್ ಎಸ್.ನಾರಾಯಣ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಸುಬ್ರಮಣ್ಯಂ ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ಎಸ್.ನಾರಾಯಣ್ ಅವರೇ ಸಂಗೀತ ನೀಡಿದ್ದು, ರಿತೀಕ್ಷ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.