Don't Miss!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಂಟ' ಸಿನಿಮಾ ನೋಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಕನ್ನಡ ಚಿತ್ರವನ್ನ ವೀಕ್ಷಿಸಿದ್ದಾರೆ. ಹೆಚ್.ಎಂ.ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ಅಭಿನಯದ 'ಪಂಟ' ಚಿತ್ರವನ್ನ ಸಿಎಂ ಸಾಹೇಬ್ರು ನೋಡಿ ಕಣ್ತುಂಬಿಕೊಂಡಿದ್ದಾರೆ.
ಅನೂಪ್ ರೇವಣ್ಣ ಅಭಿನಯದ 'ಪಂಟ' ಸಿನಿಮಾ ಇಂದು (ಜೂನ್ 23) ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಆದ್ರೆ, ಒಂದು ದಿನ ಮುಂಚೆಯೇ ಸಿಎಂಗೆ ಸಿನಿಮಾ ತೋರಿಸಲಾಗಿದೆ. ನಿನ್ನೆ (ಜೂನ್ 22) ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರೇಣುಕಾಂಬ ಚಿತ್ರಮಂದಿರದಲ್ಲಿ ಸಿದ್ದರಾಮಯ್ಯ ಅವರು 'ಪಂಟ' ನೋಡಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್, ಹೆಚ್.ಎಂ ರೇವಣ್ಣ ಮತ್ತು ಚಿತ್ರತಂಡ ಭಾಗಿಯಾಗಿತ್ತು.
ವಿಶೇಷ ಅಂದ್ರೆ, 'ಪಂಟ' ಚಿತ್ರವನ್ನ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲಾಂಚ್ ಮಾಡಿದ್ದರು. ಕಳೆದ ವರ್ಷ ಕಂಠೀರವ ಸ್ಟುಡಿಯೋದಲ್ಲಿ 'ಪಂಟ' ಸಿನಿಮಾ ಸೆಟ್ಟೇರಿತ್ತು.
ಕಲಾ ಸಾಮ್ರಾಟ್ ಎಸ್.ನಾರಾಯಣ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಸುಬ್ರಮಣ್ಯಂ ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ಎಸ್.ನಾರಾಯಣ್ ಅವರೇ ಸಂಗೀತ ನೀಡಿದ್ದು, ರಿತೀಕ್ಷ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.