Don't Miss!
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- News ‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಸೆರೆಹಿಡಿದ ಗಜನಿಗೆ ಚಿಕ್ಕಣ್ಣ ಕೊಟ್ಟ ಬೆಲೆ ಎಷ್ಟು ಗೊತ್ತಾ?
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪ್ರಾಣಿ ಪ್ರೀತಿ ಎಲ್ಲರಿಗೂ ಗೊತ್ತಿರುವುದೆ. ಸಿನಿಮಾ ಬಿಟ್ಟರೆ ಪ್ರಾಣಿ, ಪಕ್ಷಿಗಳ ಜೊತೆ ದಚ್ಚು ಫಾರ್ಮ್ ಹೌಸ್ ನಲ್ಲಿ ಬ್ಯುಸಿಯಾಗಿರುತ್ತಾರೆ. ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿರುವ ದರ್ಶನ್ ಆಗಾಗ ಅರಣ್ಯ ಸಂಚಾರ ಮಾಡುತ್ತಾರೆ.
ಕರ್ನಾಟಕ ಅರಣ್ಯ ಇಲಾಖೆಯ ರಾಯಬಾರಿಯಾಗಿರುವ ಡಿ ಬಾಸ್ ಆಗಾಗ ಅರಣ್ಯ ಸಂಚಾರ ಮಾಡಿ ಪ್ರಾಣಿಗಳನ್ನು ನೋಡಿ ಆನಂದಿಸುವ ಜೊತೆಗೆ ಸುಂದರ ಫೋಟೋಗಳನ್ನು ಸೆರೆಹಿಡಿಯುತ್ತಾರೆ. ವಿಶೇಷ ಅಂದ್ರೆ ದರ್ಶನ್ ಸೆರೆಹಿಡಿದ ಪ್ರಾಣಿಗಳ ಫೋಟೋ ಭಾರಿ ಮೊತ್ತಕ್ಕೆ ಮಾರಾಟವಾಗುತ್ತವೆ.
ಅಲ್ಲಿ ಮಹೇಶ್ ಬಾಬು, ಇಲ್ಲಿ ದರ್ಶನ್ ಮತ್ತು ಶಿವಣ್ಣ
ವಿಶೇಷ ಅಂದ್ರೆ ಈ ಬಾರಿ ದಚ್ಚು ಕ್ಲಿಕ್ಕಿಸಿದ ಆನೆ ಫೋಟೋವನ್ನು ಹಾಸ್ಯ ನಟ ಚಿಕ್ಕಣ್ಣ ಖರೀದಿಸಿದ್ದಾರೆ. ಅಚ್ಚರಿಕರ ಸಂಗತಿ ಅಂದ್ರೆ ಚಿಕ್ಕಣ್ಣ ಬರೋಬ್ಬರಿ 1ಲಕ್ಷ ಕೊಟ್ಟು ಪಡೆದುಕೊಂಡಿದ್ದಾರೆ. ದರ್ಶನ್ ಸ್ವತಹ ಅವರ ಕೈಯಿಂದನೆ ಈ ಫೋಟೋವನ್ನು ಚಿಕ್ಕಣ್ಣ ಅವರಿಗೆ ನೀಡಿದ್ದಾರೆ.
ದರ್ಶನ್ ಸೆರೆಹಿಡಿದ ಫೋಟೋಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತೆ. ಫೋಟೋಗಳನ್ನು ಮಾರಾಟ ಮಾಡಿ ಬಂದ ಹಣವನ್ನು ಅರಣ್ಯ ಇಲಾಖೆಕೆ ನೀಡಲಾಗುತ್ತೆ. ಈ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
"ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು" ಎಂದು ಚಿಕ್ಕಣ್ಣ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ ೧ ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು pic.twitter.com/aQI4KTgJn7
— Darshan Thoogudeepa (@dasadarshan) May 15, 2019
ಈ ಹಿಂದೆ ಅನೇಕರ ನಟರು ದರ್ಶನ್ ಸೆರೆಹಿಡಿದ ಫೋಟೋವನ್ನು ಖರೀದಿ ಮಾಡಿದ್ದಾರೆ. ಇತ್ತೀಚಿಗಷ್ಟೆ ನಿರ್ಮಾಪಕ ಉಮಾಪತಿ ದರ್ಶನ್ ಸೆರೆಹಿಡಿದ ಫೋಟೋವನ್ನು 10ಸಾವಿರ ಕೊಟ್ಟು ಕೊಂಡುಕೊಂಡಿದ್ದರು. ಆ ಫೋಟೋವನ್ನು ನಟ ಶ್ರೀಮುರಳಿ ಅವರಿಗೆ ಗಿಫ್ಟಾಗಿ ನೀಡಿದ್ದರು.