ಚಿಕ್ಕಣ್ಣ ಹೀರೋ ಆಗುವುದು ಪಕ್ಕಾ: ಗುಟ್ಟು ಬಿಚ್ಚಿಟ್ಟ ನಿರ್ದೇಶಕ
ಹಾಸ್ಯ ನಟ ಚಿಕ್ಕಣ್ಣ ಹೀರೋ ಆಗುತ್ತಾರೆ ಎನ್ನುವ ಸುದ್ದಿ ಪದೇ ಪದೇ ಕೇಳಿ ಬಂದಿದೆ. ಆದರೆ, ಕೊನೆಗೂ ಚಿಕ್ಕಣ್ಣ ಹೀರೋ ಆಗುವ ಸಮಯ ಇದೀಗ ಬಂದಿದೆ. ಈ ಬಾರಿ ಚಿಕ್ಕಣ್ಣ ನಾಯಕ ನಟ ಆಗುವುದು ನೂರಕ್ಕೆ ನೂರರಷ್ಟು ನಿಜ.
'ಮಾಸ್ಟರ್ ಪೀಸ್' ಸಿನಿಮಾದ ನಿರ್ದೇಶಕ ಮಂಜು ಮಾಂಡವ್ಯ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ವಿಷಯವನ್ನು ಅವರೇ ತಿಳಿಸಿದ್ದಾರೆ. ಮುಂದೆ ಚಿಕ್ಕಣ್ಣನ ಜೊತೆಗೆ ಒಂದು ಸಿನಿಮಾ ಮಾಡುತ್ತೇನೆ ಆ ಸಿನಿಮಾದಲ್ಲಿ ಅವನು ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾನೆ ಎಂದಿದ್ದಾರೆ.
ನಿರ್ದೇಶಕ ಮಂಜು ಮಾಂಡವ್ಯ 'ಶ್ರೀ ಭರತ ಬಾಹುಬಲಿ' ಸಿನಿಮಾದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಿನ್ನೆ (ಜನವರಿ 3) ನಡೆದಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಅವರು ತಿಳಿಸಿದ್ದಾರೆ.

'ರಾಜಾಹುಲಿ' ಸಿನಿಮಾದಲ್ಲಿ ಯಶ್ ಜೊತೆಗೆ ಮಂಜು ಮಾಂಡವ್ಯ ಹಾಗೂ ಚಿಕ್ಕಣ್ಣ ನಟಿಸಿದ್ದರು. ಆ ಬಳಿಕ ಮಂಜು ಮಾಂಡವ್ಯ ನಿರ್ದೇಶನದ 'ಮಾಸ್ಟರ್ ಪೀಸ್' ನಲ್ಲಿಯೂ ಚಿಕ್ಕಣ್ಣ ನಟಿಸಿದ್ದರು. ಇದೀಗ 'ಶ್ರೀ ಭರತ ಬಾಹುಬಲಿ'ಯಲ್ಲಿಯೂ ಮಂಜು ಜೊತೆಗೆ ಚಿಕ್ಕಣ್ಣ ಇದ್ದಾರೆ.
ಈ ಮೂರು ಸಿನಿಮಾಗಳ ನಂತರ ಚಿಕ್ಕಣ್ಣನನ್ನು ಇಟ್ಟುಕೊಂಡು ಮಂಜು ಮಾಂಡವ್ಯ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಿಕ್ಕಣ್ಣ ಹೀರೋ ಆಗುತ್ತಿದ್ದಾರೆ.


Click it and Unblock the Notifications











