Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕ್ಕಣ್ಣ ಹೀರೋ ಆಗುವುದು ಪಕ್ಕಾ: ಗುಟ್ಟು ಬಿಚ್ಚಿಟ್ಟ ನಿರ್ದೇಶಕ
ಹಾಸ್ಯ ನಟ ಚಿಕ್ಕಣ್ಣ ಹೀರೋ ಆಗುತ್ತಾರೆ ಎನ್ನುವ ಸುದ್ದಿ ಪದೇ ಪದೇ ಕೇಳಿ ಬಂದಿದೆ. ಆದರೆ, ಕೊನೆಗೂ ಚಿಕ್ಕಣ್ಣ ಹೀರೋ ಆಗುವ ಸಮಯ ಇದೀಗ ಬಂದಿದೆ. ಈ ಬಾರಿ ಚಿಕ್ಕಣ್ಣ ನಾಯಕ ನಟ ಆಗುವುದು ನೂರಕ್ಕೆ ನೂರರಷ್ಟು ನಿಜ.
'ಮಾಸ್ಟರ್ ಪೀಸ್' ಸಿನಿಮಾದ ನಿರ್ದೇಶಕ ಮಂಜು ಮಾಂಡವ್ಯ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ವಿಷಯವನ್ನು ಅವರೇ ತಿಳಿಸಿದ್ದಾರೆ. ಮುಂದೆ ಚಿಕ್ಕಣ್ಣನ ಜೊತೆಗೆ ಒಂದು ಸಿನಿಮಾ ಮಾಡುತ್ತೇನೆ ಆ ಸಿನಿಮಾದಲ್ಲಿ ಅವನು ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾನೆ ಎಂದಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಕಿದ ಸವಾಲು ಸ್ವೀಕರಿಸಿದ ನಟ ಚಿಕ್ಕಣ್ಣ
ನಿರ್ದೇಶಕ ಮಂಜು ಮಾಂಡವ್ಯ 'ಶ್ರೀ ಭರತ ಬಾಹುಬಲಿ' ಸಿನಿಮಾದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಿನ್ನೆ (ಜನವರಿ 3) ನಡೆದಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಅವರು ತಿಳಿಸಿದ್ದಾರೆ.
'ರಾಜಾಹುಲಿ' ಸಿನಿಮಾದಲ್ಲಿ ಯಶ್ ಜೊತೆಗೆ ಮಂಜು ಮಾಂಡವ್ಯ ಹಾಗೂ ಚಿಕ್ಕಣ್ಣ ನಟಿಸಿದ್ದರು. ಆ ಬಳಿಕ ಮಂಜು ಮಾಂಡವ್ಯ ನಿರ್ದೇಶನದ 'ಮಾಸ್ಟರ್ ಪೀಸ್' ನಲ್ಲಿಯೂ ಚಿಕ್ಕಣ್ಣ ನಟಿಸಿದ್ದರು. ಇದೀಗ 'ಶ್ರೀ ಭರತ ಬಾಹುಬಲಿ'ಯಲ್ಲಿಯೂ ಮಂಜು ಜೊತೆಗೆ ಚಿಕ್ಕಣ್ಣ ಇದ್ದಾರೆ.
ಪೋಲ್ಯಾಂಡ್ ನಲ್ಲಿರುವ 'ಕೋಟಿಗೊಬ್ಬನ' ಮೊದಲ ದರ್ಶನ
ಈ ಮೂರು ಸಿನಿಮಾಗಳ ನಂತರ ಚಿಕ್ಕಣ್ಣನನ್ನು ಇಟ್ಟುಕೊಂಡು ಮಂಜು ಮಾಂಡವ್ಯ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಿಕ್ಕಣ್ಣ ಹೀರೋ ಆಗುತ್ತಿದ್ದಾರೆ.