Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಸರ್ಜಾ 11ನೇ ದಿನದ ಪುಣ್ಯತಿಥಿ: ಕುಟುಂಬದಿಂದ ಮಾಧ್ಯಮಗಳಿಗೆ ಮನವಿ
ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ ಹೊಂದಿ ಇಂದಿಗೆ ಹನ್ನೊಂದು ದಿನ. ಹಾಗಾಗಿ ಹಲವು ಕಾರ್ಯಗಳನ್ನು ಇಂದು ನೆರವೇರಿಸಲಾಗುತ್ತದೆ.
Recommended Video
ಪುಣ್ಯತಿಥಿ ಕಾರ್ಯವನ್ನು ಕನಕಪುರ ರಸ್ತೆಯ ಬೃಂದಾವನ ಫಾರಂ ಹೌಸ್ನಲ್ಲಿ ಬೆಳಿಗ್ಗೆ 10:30 ಮಾಡಲಾಗುತ್ತದೆ. ಸರ್ಜಾ ಕುಟುಂಬಸ್ಥರು, ಮೇಘನಾ ರಾಜ್ ಕುಟುಂಬ ಸದಸ್ಯರು, ಕುಟುಂಬ ಆಪ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸರ್ಜಾ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ರಾಘವೇಂದ್ರ ರಾಜ್ ಕುಮಾರ್ ಫ್ಯಾಮಿಲಿ
ವಿಧಿಯಾಟದ ಮುಂದೆ ಏನೂ ಇಲ್ಲ ಎಂಬುದು ಚಿರಂಜೀವಿ ಸರ್ಜಾ ಅಕಾಲಿಕ ಮರಣದಿಂದ ಮನದಟ್ಟಾಗಿದೆ. ನಮ್ಮ ಕುಟುಂಬದಲ್ಲಿ ಇಂಥಾದ್ದೊಂದು ಸಂದರ್ಭ ಬರುತ್ತೆ ಎಂದು ನಾವು ಕನಸಿನಲ್ಲೂ ಅಂದುಕೊಂಡಿರಲಿಲ್ಲ ಎಂದಿರುವ ಧ್ರುವ ಸರ್ಜಾ ಪುಣ್ಯತಿಥಿ ಕಾರ್ಯಕ್ಕೆ ಆಹ್ವಾನ ನೀಡಿದ್ದಾರೆ.
ಮಾಧ್ಯಮಗಳಿಗೆ ಮನವಿ
11 ನೇ ದಿನದ ಪುಣ್ಯತಿಥಿ ಕಾರ್ಯವು ಕುಟುಂಬದ ಖಾಸಗಿ ಕಾರ್ಯಕ್ರಮವಾದ್ದರಿಂದ ಮಾಧ್ಯಮಗಳವರು ಕ್ಯಾಮೆರಾ ತರಬಾರದು ಎಂದು ಮನವಿ ಮಾಡಲಾಗಿದೆ. ಕ್ಯಾಮೆರಾ ಇಲ್ಲದೆ ಹಾಗೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.
ಭವ್ಯ ಮಂಟಪ ನಿರ್ಮಿಸಲಿರುವ ಧ್ರುವ ಸರ್ಜಾ
ಚಿರು ಸರ್ಜಾ ಸಮಾಧಿ ಸ್ಥಳದಲ್ಲಿ ಈಗಾಗಲೆ ಸಣ್ಣ ಮಂಟಪ ನಿರ್ಮಿಸಲಾಗಿದೆಯಂತೆ. ಅದೇ ಸ್ಥಳದಲ್ಲಿ ಭವ್ಯವಾದ ಮಂಟಪವನ್ನು ಕಟ್ಟುವ ಇರಾದೆ ಧ್ರುವ ಸರ್ಜಾ ಅವರಿಗಿದೆ.
ಚಿರು ಸರ್ಜಾ ಮೇಲೆ ಬಂಡವಾಳ ಹೂಡಿದವರ ನೆರವಿಗೆ ಧ್ರುವ ಸರ್ಜಾ?
ರಾಘವೇಂದ್ರ ರಾಜ್ಕುಮಾರ್ ಭೇಟಿ
ಕೆಲವು ದಿನಗಳ ಹಿಂದಷ್ಟೆ ರಾಘವೇಂದ್ರ ರಾಜ್ಕುಮಾರ್ ಅವರು ಚಿರು ಸರ್ಜಾ ಮನೆಗೆ ಭೇಟಿ ನೀಡಿ ಧೈರ್ಯತುಂಬುವ ಕಾರ್ಯ ಮಾಡಿದ್ದರು. ಮೇಘನಾ ರಾಜ್ ಕುಟುಂಬವನ್ನೂ ಸಹ ಅವರು ಭೇಟಿ ಮಾಡಿ ಮಾತನಾಡಿದ್ದರು.
ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ಗೆ ಗೌರವ ಸಲ್ಲಿಸಿದ ಗೂಗಲ್
ಜೂನ್ 7 ರಂದು ಹೃದಯಾಘಾತದಿಂದ ಸಾವು
ಚಿರಂಜೀವಿ ಸರ್ಜಾ ಅವರು ಕಳೆದ ಭಾನುವಾರ (ಜೂನ್ 7) ರಂದು ತೀವ್ರ ಹೃದಯಾಘಾತದಿಂದ ಮರಣ ಹೊಂದಿದರು. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು. ಮೇಘನಾ ರಾಜ್ ಅವರನ್ನು ಎರಡು ವರ್ಷದ ಹಿಂದಷ್ಟೆ ಮದುವೆಯಾಗಿದ್ದರು. ಮಗುವಿನ ನಿರೀಕ್ಷೆಯಲ್ಲಿದ್ದರು ಅವರು.