Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಗಾಸ್ಟಾರ್ ಚಿರಂಜೀವಿಯ 152ನೇ ಚಿತ್ರ ಆರಂಭ
ಮೆಗಾಸ್ಟಾರ್ ಚಿರಂಜೀವಿ ಅವರ 'ಸೈರಾ ನರಸಿಂಹ ರೆಡ್ಡಿ' ಸಿನಿಮಾ ಬಾಕ್ಸ್ ಆಫೀಸ್ ಧೂಳೆಬ್ಬಿಸಿ ಮುನ್ನುಗ್ಗುತ್ತಿದೆ. 151ನೇ ಸಿನಿಮಾ ರಿಲೀಸ್ ಆಗಿ ಏಳನೇ ದಿನಕ್ಕೆ 152ನೇ ಸಿನಿಮಾ ಆರಂಭಿಸಿದ್ದಾರೆ ಮೆಗಾ ಹೀರೋ. ಹೌದು, ಚಿರಂಜೀವಿಯ ಹೊಸ ಸಿನಿಮಾದ ಮುಹೂರ್ತ ನಡೆದಿದೆ.
ವಿಜಯದಶಮಿ ಪ್ರಯುಕ್ತ ಚಿರಂಜೀವಿ ನಟಿಸಲಿರುವ ಮುಂದಿನ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ತೆಲುಗಿನ ಖ್ಯಾತ ನಿರ್ದೇಶಕ ಕೊರಟಲಾ ಶಿವ ಈ ಸಿನಿಮಾ ನಿರ್ದೇಶನ ಮಾಡುತ್ತಿರುವುದು ವಿಶೇಷ.
ಸೌತ್ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ನಿರ್ಮಿಸಿದ ಸೈರಾ ನರಸಿಂಹ ರೆಡ್ಡಿ
ಮಿರ್ಚಿ, ಶ್ರೀಮಂತಡು, ಜನತಾ ಗ್ಯಾರೇಜ್, ಭರತ್ ಅನೇ ನೇನು ಅಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನ ನೀಡಿರುವ ಕೊರಟಲಾ ಶಿವ ಅವರು ಈಗ ಮೆಗಾಸ್ಟಾರ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ನಿರ್ಮಾಣದಲ್ಲೂ ರಾಮ್ ಚರಣ್ ಭಾಗಿಯಾಗಲಿದ್ದಾರೆ.
ಸಾಮಾಜಿಕ ಸಂದೇಶವನ್ನ ನೀಡುವಂತಹ ಸಿನಿಮಾಗಳನ್ನ ಮಾಸ್ ಎಲಿಮೆಂಟ್ಸ್ ಮೂಲಕ ಪ್ರೇಕ್ಷಕರಿಗೆ ತಲುಪಿಸುವಲ್ಲಿ ನಿರ್ದೇಶಕ ಕೊರಟಲಾ ಶಿವ ನಿಪುಣರು. ಭರತ್ ಅನೇ ನೇನು ಯಶಸ್ಸಿನ ಬಳಿಕ ಚಿರಂಜೀವಿ ಅವರಿಗೆ ಕಥೆ ಹೇಳಿದ್ದರು. ಆಗಲೇ ಕಥೆಗೆ ಓಕೆ ಹೇಳಿದ್ದ ಚಿರು, ಸೈರಾ ಸಿನಿಮಾ ಮುಗಿಯುವರೆಗೂ ಕಾಯಲು ಸೂಚಿಸಿದ್ದರು.
ತಮನ್ನಾಗೆ ರಾಮ್ ಚರಣ್ ಪತ್ನಿ ಕೊಟ್ಟಿದ್ದು ವಜ್ರದ ಉಂಗುರನಾ?
ಈಗ ಸೈರಾ ಗೆದ್ದಿದೆ. ಆ ಕಡೆ ಡೈರೆಕ್ಟರ್ ಶಿವ ಅವರು ಕೂಡ ಚಿರು ಚಿತ್ರಕ್ಕಾಗಿ ಎಲ್ಲ ತಯಾರಿ ನಡೆಸಿಕೊಂಡಿದ್ದಾರೆ. ಸಂಪ್ರದಾಯವಾಗಿ ಪೂಜೆ ಮಾಡಿರುವ ಚಿತ್ರತಂಡ ಸದ್ಯದಲ್ಲೇ ಶೂಟಿಂಗ್ ಆರಂಭಿಸಲಿದೆ. ಆದರೆ, ಯಾವ ರೀತಿಯ ಕಥೆ ಹೊಂದಿರುತ್ತೆ, ನಾಯಕಿ ಯಾರಾಗಬಹುದು ಎಂಬ ಕುತೂಹಲ ಮಾತ್ರ ಇನ್ನು ಸ್ವಲ್ಪ ದಿನ ಹಾಗೆ ಉಳಿಯಲಿದೆ.