Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಗಾಸ್ಟಾರ್ ಚಿರಂಜೀವಿಯ 152ನೇ ಚಿತ್ರ ಆರಂಭ
ಮೆಗಾಸ್ಟಾರ್ ಚಿರಂಜೀವಿ ಅವರ 'ಸೈರಾ ನರಸಿಂಹ ರೆಡ್ಡಿ' ಸಿನಿಮಾ ಬಾಕ್ಸ್ ಆಫೀಸ್ ಧೂಳೆಬ್ಬಿಸಿ ಮುನ್ನುಗ್ಗುತ್ತಿದೆ. 151ನೇ ಸಿನಿಮಾ ರಿಲೀಸ್ ಆಗಿ ಏಳನೇ ದಿನಕ್ಕೆ 152ನೇ ಸಿನಿಮಾ ಆರಂಭಿಸಿದ್ದಾರೆ ಮೆಗಾ ಹೀರೋ. ಹೌದು, ಚಿರಂಜೀವಿಯ ಹೊಸ ಸಿನಿಮಾದ ಮುಹೂರ್ತ ನಡೆದಿದೆ.
ವಿಜಯದಶಮಿ ಪ್ರಯುಕ್ತ ಚಿರಂಜೀವಿ ನಟಿಸಲಿರುವ ಮುಂದಿನ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ತೆಲುಗಿನ ಖ್ಯಾತ ನಿರ್ದೇಶಕ ಕೊರಟಲಾ ಶಿವ ಈ ಸಿನಿಮಾ ನಿರ್ದೇಶನ ಮಾಡುತ್ತಿರುವುದು ವಿಶೇಷ.
ಸೌತ್ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ನಿರ್ಮಿಸಿದ ಸೈರಾ ನರಸಿಂಹ ರೆಡ್ಡಿ
ಮಿರ್ಚಿ, ಶ್ರೀಮಂತಡು, ಜನತಾ ಗ್ಯಾರೇಜ್, ಭರತ್ ಅನೇ ನೇನು ಅಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನ ನೀಡಿರುವ ಕೊರಟಲಾ ಶಿವ ಅವರು ಈಗ ಮೆಗಾಸ್ಟಾರ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ನಿರ್ಮಾಣದಲ್ಲೂ ರಾಮ್ ಚರಣ್ ಭಾಗಿಯಾಗಲಿದ್ದಾರೆ.
ಸಾಮಾಜಿಕ ಸಂದೇಶವನ್ನ ನೀಡುವಂತಹ ಸಿನಿಮಾಗಳನ್ನ ಮಾಸ್ ಎಲಿಮೆಂಟ್ಸ್ ಮೂಲಕ ಪ್ರೇಕ್ಷಕರಿಗೆ ತಲುಪಿಸುವಲ್ಲಿ ನಿರ್ದೇಶಕ ಕೊರಟಲಾ ಶಿವ ನಿಪುಣರು. ಭರತ್ ಅನೇ ನೇನು ಯಶಸ್ಸಿನ ಬಳಿಕ ಚಿರಂಜೀವಿ ಅವರಿಗೆ ಕಥೆ ಹೇಳಿದ್ದರು. ಆಗಲೇ ಕಥೆಗೆ ಓಕೆ ಹೇಳಿದ್ದ ಚಿರು, ಸೈರಾ ಸಿನಿಮಾ ಮುಗಿಯುವರೆಗೂ ಕಾಯಲು ಸೂಚಿಸಿದ್ದರು.
ತಮನ್ನಾಗೆ ರಾಮ್ ಚರಣ್ ಪತ್ನಿ ಕೊಟ್ಟಿದ್ದು ವಜ್ರದ ಉಂಗುರನಾ?
ಈಗ ಸೈರಾ ಗೆದ್ದಿದೆ. ಆ ಕಡೆ ಡೈರೆಕ್ಟರ್ ಶಿವ ಅವರು ಕೂಡ ಚಿರು ಚಿತ್ರಕ್ಕಾಗಿ ಎಲ್ಲ ತಯಾರಿ ನಡೆಸಿಕೊಂಡಿದ್ದಾರೆ. ಸಂಪ್ರದಾಯವಾಗಿ ಪೂಜೆ ಮಾಡಿರುವ ಚಿತ್ರತಂಡ ಸದ್ಯದಲ್ಲೇ ಶೂಟಿಂಗ್ ಆರಂಭಿಸಲಿದೆ. ಆದರೆ, ಯಾವ ರೀತಿಯ ಕಥೆ ಹೊಂದಿರುತ್ತೆ, ನಾಯಕಿ ಯಾರಾಗಬಹುದು ಎಂಬ ಕುತೂಹಲ ಮಾತ್ರ ಇನ್ನು ಸ್ವಲ್ಪ ದಿನ ಹಾಗೆ ಉಳಿಯಲಿದೆ.