Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಚಿರಂಜೀವಿ ಸರ್ಜಾ ವಿಧಿವಶ: ನಾಳೆ 11ಗಂಟೆಗೆ ಅಂತ್ಯಕ್ರಿಯೆ
ಸ್ಯಾಂಡಲ್ ವುಡ್ ನಲ್ಲಿ ಚಿರು ಅಂತ ಖ್ಯಾತಿಗಳಿಸಿರುವ ನಟ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಚಿಕ್ಕವಯಸ್ಸಿನಲ್ಲಿಯೆ ಜೀವನ ಮುಗಿಸಿ ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ. ಜಿರಂಜೀವಿ ಸರ್ಜಾ ಅವರ ದಿಢೀರ್ ಸಾವು ಕುಟುಂಬದವರಿಗೆ, ಸ್ನೇಹಿತರಿಗೆ, ಅಭಿಮಾನಿಗಳಿಗೆ ದೊಡ್ಡ ಆಘಾತವೊಂಟು ಮಾಡಿದೆ.
Recommended Video
ಸರ್ಜಾ ಕುಟುಂಬವೀಗ ಅರ್ಜುನ್ ಸರ್ಜಾ ಮತ್ತು ಅಜ್ಜಿಗಾಗಿ ಕಾಯುತ್ತಿದ್ದಾರೆ. ಚೆನ್ನೈನಲ್ಲಿರುವ ಅರ್ಜುನ್ ಸರ್ಜಾ ಕುಟುಂಬ ಬೆಂಗಳೂರಿಗೆ ಬರಲು ಇನ್ನೂ ನಾಲ್ಕು ಗಂಟೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇಂದು ರಾತ್ರಿ ವೇಳೆ ಅರ್ಜುನ್ ಸರ್ಜಾ ಬೆಂಗಳೂರಿಗೆ ಬರಲಿದ್ದಾರೆ. ನಾಳೆ ಬೆಳಗ್ಗೆ 11ಗಂಟೆ ಸುಮಾರಿಗೆ ಚಿರು ಸರ್ಜಾ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಚಿರು ಸರ್ಜಾ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆಯಾ ಅಥವಾ ಸರ್ಜಾ ಕುಟುಂಬದ ಮೂಲ ಊರಾದ ತುಮಕೂರಿ ಜೆಲ್ಲಿಯ ಮಧುಗಿರಿಯಲ್ಲಿ ನಡೆಯಲಿದೆಯಾ ಎನ್ನುವುದು ಇನ್ನು ಅಧಿಕೃತವಾಗಿಲ್ಲ.
ಮಗುವಿನ ಮುಖ ನೋಡುವ ಮುನ್ನವೇ ಇಹಲೋಕ ತ್ಯಜಿಸಿದ ಚಿರಂಜೀವಿ ಸರ್ಜಾ
ಇಂದು ಮದ್ಯಾಹ್ನ 2ಗಂಟೆ ಸುಮಾರಿಗೆ ಚಿರಂಜೀವಿ ಸರ್ಜಾಗೆ ಹೃದಯಾಘಾತ ವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೆ ಚಿರು ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ಚಿರು ಪಾರ್ಥಿವ ಶರೀರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು, ಕೊರೊನಾ ಪರೀಕ್ಷೆಯ ನಂತರ ಕುಟುಂಬಕ್ಕೆ ಹಸ್ತಾಂತರವಾಗಲಿದೆ.
ಆಸ್ಪತ್ರೆಯಲ್ಲಿ ಸದ್ಯ ಚಿರಂಜೀವಿ ಅವರ ಇಡೀ ಕುಟುಂಬವಿದೆ. ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರಾದ, ತಾರಾ, ನಿರ್ಮಾಪಕ ಕೆ ಮಂಜು, ಕಿಚ್ಚ ಸುದೀಪ್ ಸೇರಿದ್ದಂತೆ ಅನೇಕರು ಆಸ್ಪತ್ರೆಯಲ್ಲಿ ಬೀಡುಬಿಟ್ಟಿದ್ದಾರೆ.