ಕುದುರೆಯಿಂದ ಬಿದ್ದ ಚಿರಂಜೀವಿ ಆಸ್ಪತ್ರೆಗೆ ದಾಖಲು

By Rajendra

ಕನ್ನಡ ನಟ ಚಿರಂಜೀವಿ ಸರ್ಜಾ ಅವರು ವರದನಾಯಕ ಚಿತ್ರೀಕರಣ ವೇಳ ಗಾಯಗೊಂಡಿದ್ದಾರೆ. ಮೈಸೂರಿನಲ್ಲಿ ಕುದುರೆ ಮೇಲಿಂದ ಬಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತು.

'ವರದನಾಯಕ' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಈ ಚಿತ್ರದ ಸಾಹಸ ಸನ್ನಿವೇಶದಲ್ಲಿ ಚಿರು ಕುದುರೆಯಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯಾವುದೇ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರು ಮರಳಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಅತಿಥಿ ಪಾತ್ರವನ್ನು ಪೋಷಿಸುತ್ತಿದ್ದಾರೆ.

ನಿಖಿತಾ ಪಾಟೀಲ್, ಸಮೀರಾ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಶೋಭ್‌ರಾಜ್, ಶರತ್ ಲೋಹಿತಾಶ್ವಾ, ಬುಲೆಟ್ ಪ್ರಕಾಶ್, ಶರಣ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಕೇಶ್ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಈಶ್ವರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಚಿತ್ರಕ್ಕಿದೆ. (ಏಜೆನ್ಸೀಸ್)

More from Filmibeat

English summary
Kannada actor Chiranjeevi Sarja injured during shooting of a fight sequence of his latest film Varadanayaka in Mysore. He was taken to a hospital where he is said to be out of danger.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X