twitter
    For Quick Alerts
    ALLOW NOTIFICATIONS  
    For Daily Alerts

    ಹಿರಿಯ ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    By Bharath Kumar
    |

    ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಜಯಂತಿ ಅವರ ಆರೋಗ್ಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಮೈಸೂರು ಪ್ರವಾಸಕ್ಕೂ ಮುನ್ನಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಜಯಂತಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

    ಇನ್ನು ಜಯಂತಿ ಅವರೊಂದಿಗೆ ಮುಖ್ಯಮಂತ್ರಿ ಅವರು ಮಾತನಾಡಿದ್ದು, ಅದರ ಫೋಟೋ ಬಹಿರಂಗವಾಗಿದೆ. ನಂತರ ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಅವರೊಡನೆ ಮಾತನಾಡಿದ ಸಿದ್ದರಾಮಯ್ಯ ಅವರು, ಶೀಘ್ರ ಗುಣಮುಖರಾಗುವಂತೆ ಎಚ್ಚರವಹಿಸಿ ಎಂದು ಹೇಳಿದರು.

    ಇಂದು ನಟಿ ಜಯಂತಿ ವಾರ್ಡ್ ಗೆ ಶಿಫ್ಟ್ : ಸುಳ್ಳು ವದಂತಿಗಳಿಗೆ ಬ್ರೇಕ್ ಇಂದು ನಟಿ ಜಯಂತಿ ವಾರ್ಡ್ ಗೆ ಶಿಫ್ಟ್ : ಸುಳ್ಳು ವದಂತಿಗಳಿಗೆ ಬ್ರೇಕ್

    Chirf Minister Siddaramaiah visit to Vikram Hospital

    ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ಸತೀಶ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಜಯಂತಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರುವುದರಿಂದ ವೆಂಟಿಲೇಟರ್ ತೆಗೆಯಲಾಗಿದೆ.

    ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ: ಅಭಿನಯ ಶಾರದೆ ಹೆಸರಲ್ಲಿ ಮೃತ್ಯುಂಜಯ ಹೋಮನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ: ಅಭಿನಯ ಶಾರದೆ ಹೆಸರಲ್ಲಿ ಮೃತ್ಯುಂಜಯ ಹೋಮ

    ಜಯಂತಿ ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಅನೇಕ ಗಣ್ಯರು ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಮತ್ತೊಂದೆಡೆ ಹಿರಿಯ ನಟಿ ಜಯಂತಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ನಿರ್ಮಾಪಕ ಭಾ.ಮಾ.ಹರೀಶ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಮೃತ್ಯುಂಜಯ ಹೋಮ ಮಾಡಿಸಿದ್ದಾರೆ.

    English summary
    Karnataka Chirf Minister Siddaramaiah visits to Vikram Hospital and enquirers the health condition of veteran actress Jayanthi.
    Thursday, March 29, 2018, 14:19
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X