Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಭುದೇವ ತಮ್ಮ ನಾಗೇಂದ್ರ 'ಮರೆಯುವ ಮುನ್ನ'
ಈ ನಟನನ್ನು ನೋಡಿದರೆ ಎಲ್ಲೋ ನೋಡಿದಂತಿದೆಯಲ್ಲಾ ಎಂದು ಅನ್ನಿಸುತ್ತದೆ ಅಲ್ಲವೇ? ಹೌದು ಅದು 2001ನೇ ಸಾಲಿನಲ್ಲಿ ಬಿಡುಗಡೆಯಾದ 'ಚಿತ್ರ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಅಡಿಯಿಟ್ಟ ನಟ ನಾಗೇಂದ್ರ ಪ್ರಸಾದ್.
ಇದೀಗ ಅವರು ಸ್ಯಾಂಡಲ್ ವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇವರು ಬೇರಾರು ಅಲ್ಲ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವ ಅವರ ಸಹೋದರ. ಹದಿನೈದು ವರ್ಷಗಳ ಬಳಿಕ ಮತ್ತೆ ಗಾಂಧಿನಗರಕ್ಕೆ ಅಡಿಯಿಡುತ್ತಿದ್ದಾರೆ ನಾಗೇಂದ್ರ. [ಮುಂಬೈ ಡಾನ್ಸರ್ ಜತೆ ಪ್ರಭುದೇವ ಎರಡನೇ ಮದುವೆ?]
ಸುಪ್ರೀತ್ ಶಂಕರ್ ರತ್ನ ಎಂಬುವವರು ನಿರ್ಮಿಸಿ ನಿರ್ದೇಶಿಸುತ್ತಿರುವ ಚಿತ್ರ ಇದು. ಅದೆಲ್ಲಾ ಸರಿ ನಾಗೇಂದ್ರ ಇಷ್ಟು ದಿನ ಎಲ್ಲಿ ಕಾಣೆಯಾಗಿದ್ದರು ಎಂದರೆ, ಅವರು ನಿರ್ದೇಶಕನಾಗುವ ಪ್ರಯತ್ನದಲ್ಲಿದ್ದರಂತೆ. ಆ ಪ್ರಯತ್ನದಲ್ಲಿ ಒಂದಷ್ಟು ಯಶಸ್ಸನ್ನೂ ಕಂಡಿದ್ದಾರಂತೆ.
ಅಣ್ಣನ 'ರೌಡಿ ರಾಥೋಡ್' ಚಿತ್ರಕ್ಕೆ ಸಹಾಯಕನಾಗಿ ಕೆಲಸ ಮಾಡಿ ಒಂದಷ್ಟು ಅನುಭವ ಸಂಪಾದಿಸಿದ್ದಾರೆ. ನಟನೆಗಿಂತಲೂ ತನಗೆ ನಿರ್ದೇಶಕನಾಗಬೇಕೆಂಬ ಹಂಬಲ ಜಾಸ್ತಿ ಇದ್ದ ಕಾರಣ ನಟನೆಗೆ ದೂರವಾಗಿ ಉಳಿದಿದ್ದರು.
ನಿರ್ದೇಶಕನಾಗಬೇಕೆಂಬ ಕನಸಿಗೆ ಸಾಕಷ್ಟು ಇಂಬು ಕೊಟ್ಟವರು ಅಣ್ಣ. ಅವರ ಸಲಹೆ ಸೂಚನೆಯಂತೆ ಲಂಡನ್ ನಲ್ಲಿ ನಿರ್ದೇಶನದ ಕೋರ್ಸ್ ಮಾಡಿದೆ. ಇದೀಗ ಮತ್ತೆ ಸ್ಯಾಂಡಲ್ ವುಡ್ ಗೆ ಮರಳಿರುವುದು ಖುಷಿ ಕೊಟ್ಟಿದೆ ಎನ್ನುತ್ತಾರೆ ನಾಗೇಂದ್ರ.