Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಭುದೇವ ತಮ್ಮ ನಾಗೇಂದ್ರ 'ಮರೆಯುವ ಮುನ್ನ'
ಈ ನಟನನ್ನು ನೋಡಿದರೆ ಎಲ್ಲೋ ನೋಡಿದಂತಿದೆಯಲ್ಲಾ ಎಂದು ಅನ್ನಿಸುತ್ತದೆ ಅಲ್ಲವೇ? ಹೌದು ಅದು 2001ನೇ ಸಾಲಿನಲ್ಲಿ ಬಿಡುಗಡೆಯಾದ 'ಚಿತ್ರ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಅಡಿಯಿಟ್ಟ ನಟ ನಾಗೇಂದ್ರ ಪ್ರಸಾದ್.
ಇದೀಗ ಅವರು ಸ್ಯಾಂಡಲ್ ವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇವರು ಬೇರಾರು ಅಲ್ಲ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವ ಅವರ ಸಹೋದರ. ಹದಿನೈದು ವರ್ಷಗಳ ಬಳಿಕ ಮತ್ತೆ ಗಾಂಧಿನಗರಕ್ಕೆ ಅಡಿಯಿಡುತ್ತಿದ್ದಾರೆ ನಾಗೇಂದ್ರ. [ಮುಂಬೈ ಡಾನ್ಸರ್ ಜತೆ ಪ್ರಭುದೇವ ಎರಡನೇ ಮದುವೆ?]
ಸುಪ್ರೀತ್ ಶಂಕರ್ ರತ್ನ ಎಂಬುವವರು ನಿರ್ಮಿಸಿ ನಿರ್ದೇಶಿಸುತ್ತಿರುವ ಚಿತ್ರ ಇದು. ಅದೆಲ್ಲಾ ಸರಿ ನಾಗೇಂದ್ರ ಇಷ್ಟು ದಿನ ಎಲ್ಲಿ ಕಾಣೆಯಾಗಿದ್ದರು ಎಂದರೆ, ಅವರು ನಿರ್ದೇಶಕನಾಗುವ ಪ್ರಯತ್ನದಲ್ಲಿದ್ದರಂತೆ. ಆ ಪ್ರಯತ್ನದಲ್ಲಿ ಒಂದಷ್ಟು ಯಶಸ್ಸನ್ನೂ ಕಂಡಿದ್ದಾರಂತೆ.
ಅಣ್ಣನ 'ರೌಡಿ ರಾಥೋಡ್' ಚಿತ್ರಕ್ಕೆ ಸಹಾಯಕನಾಗಿ ಕೆಲಸ ಮಾಡಿ ಒಂದಷ್ಟು ಅನುಭವ ಸಂಪಾದಿಸಿದ್ದಾರೆ. ನಟನೆಗಿಂತಲೂ ತನಗೆ ನಿರ್ದೇಶಕನಾಗಬೇಕೆಂಬ ಹಂಬಲ ಜಾಸ್ತಿ ಇದ್ದ ಕಾರಣ ನಟನೆಗೆ ದೂರವಾಗಿ ಉಳಿದಿದ್ದರು.
ನಿರ್ದೇಶಕನಾಗಬೇಕೆಂಬ ಕನಸಿಗೆ ಸಾಕಷ್ಟು ಇಂಬು ಕೊಟ್ಟವರು ಅಣ್ಣ. ಅವರ ಸಲಹೆ ಸೂಚನೆಯಂತೆ ಲಂಡನ್ ನಲ್ಲಿ ನಿರ್ದೇಶನದ ಕೋರ್ಸ್ ಮಾಡಿದೆ. ಇದೀಗ ಮತ್ತೆ ಸ್ಯಾಂಡಲ್ ವುಡ್ ಗೆ ಮರಳಿರುವುದು ಖುಷಿ ಕೊಟ್ಟಿದೆ ಎನ್ನುತ್ತಾರೆ ನಾಗೇಂದ್ರ.