Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಣಿರತ್ನಂ 'ಕಡಲ್'ನಲ್ಲಿ ಎದ್ದಿದೆ ಹೊಸ ಸುನಾಮಿ
'ಕಡಲ್' ಚಿತ್ರದಲ್ಲಿನ ಕೆಲವು ಸನ್ನಿವೇಶಗಳಿಗೆ ಕತ್ತರಿ ಹಾಕುವಂತೆ ಆಗ್ರಹಿಸಿವೆ. ಚಿತ್ರದಲ್ಲಿ ಕ್ರೈಸ್ತರ ಭಾವನೆಗಳಿಗೆ ಧಕ್ಕೆ ತರುವಂತೆ ಸನ್ನಿವೇಶಗಳಿವೆ. ಅವಕ್ಕೆ ಕೂಡಲೆ ಕತ್ತರಿ ಹಾಕಿ ಎಂದು ಇಂಡಿಯನ್ ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷ ಆಗ್ರಹಿಸಿದೆ. [ ಕಡಲ್ ಚಿತ್ರ ಹೇಗಿದೆ ಇಲ್ಲಿ ಓದಿ]
ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಆದಷ್ಟು ಬೇಗ ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ. ಅರ್ಜುನ್ ಸರ್ಜಾ, ಅರವಿಂದ ಸ್ವಾಮಿ, ಗೌತಮ್ ಹಾಗೂ ತುಲಸಿ ಮುಖ್ಯಭೂಮಿಕೆಯಲ್ಲಿರುವ ಚಿತ್ರ ಇದಾಗಿದೆ.
'ರಾವಣ್' ಚಿತ್ರ ಪ್ಲಾಫ್ ಆದ ಮೇಲೆ ಎರಡು ವರ್ಷಗಳ ಸುದೀರ್ಘ ಸಮಯ ಬಳಿಕ 'ಕಡಲ್' ಚಿತ್ರದೊಂದಿಗೆ ಮಣಿರತ್ನಂ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಇಷ್ಟಕ್ಕೂ ಚಿತ್ರದ ಕಥೆ ಏನೆಂದರೆ...ಕ್ರೈಸ್ತ ಸಮುದಾಯಕ್ಕೆ ಸೇರಿದ ಮೀನು ಹಿಡಿಯುವ ನಾಯಕ ಥಾಮಮ್ ಹಾಗೂ ಬಿಟ್ರಸ್ ಎಂಬ ಯವತಿ ನಡುವಿನ ಪ್ರೇಮ ಕಥಾನಕವನ್ನು ಚಿತ್ರ ಒಳಗೊಂಡಿದೆ.
ಒಳ್ಳೆಯದು ಕೆಟ್ಟದರ ನಡುವಿನ ಹೋರಾಟವನ್ನು ತಮ್ಮ ಚಿತ್ರದಲ್ಲಿ ಮಣಿರತ್ನಂ ತೋರಿಸಿದ್ದಾರೆ. ಕ್ರೈಸ್ತರ ಪವಿತ್ರ ಗ್ರಂಥ ಬೈಬಲ್ ನ್ನು ಆಧಾರವಾಗಿಟ್ಟುಕೊಂಡು ಕಥೆ ಹೆಣೆದು ಅದನ್ನು ಚಿತ್ರದ ಪಾತ್ರವರ್ಗಗಳಲ್ಲಿ ತೋರಿಸುವ ಪ್ರಯತ್ನವನ್ನು ಮಣಿರತ್ನಂ ಮಾಡಿದ್ದಾರೆ. ಇದೇ ವಿಷಯವೇ ಈಗ ವಿವಾದಕ್ಕೆ ಕಾರಣವಾಗಿರುವುದು.