Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಭೇಟಿ ಮಾಡಿದ ಶಿವರಾಜ್ ಕುಮಾರ್ ನಿಯೋಗ: ಅಕ್ಟೋಬರ್ 1 ರಿಂದ ಚಿತ್ರಮಂದಿರ ಓಪನ್!
ಕಳೆದ ಆರು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಚಿತ್ರಮಂದಿರಗಳು ಅಕ್ಟೋಬರ್ 1 ರಿಂದ ತೆರೆಯಲಿದೆ ಎಂಬ ವಿಚಾರ ಹೊರಬಿದ್ದಿದೆ. ಮುಂದಿನ ತಿಂಗಳ ಆರಂಭದಿಂದ ಸಿನಿಮಾ ಮಂದಿರ ಕಾರ್ಯನಿರ್ವಹಿಸಲು ಕೇಂದ್ರ ಸಮ್ಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಚರ್ಚಿಸಿದ್ದು, ಅಕ್ಟೋಬರ್ 1 ರಿಂದ ದೇಶಾದ್ಯಂತ ಚಿತ್ರಮಂದಿರ ತೆರೆಯಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ.
'ಧೈರ್ಯವಾಗಿ ಶೂಟಿಂಗ್ ಶುರು ಮಾಡಿ', ಮತ್ತೆ ಅಖಾಡಕ್ಕಿಳಿದ ಶಿವಣ್ಣ
ಈ ಮಧ್ಯೆ ಕನ್ನಡ ಚಲನಚಿತ್ರರಂಗದ ಪರವಾಗಿ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದೆ. ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ನೆರವು ನೀಡಬೇಕು ಹಾಗೂ ಚಿತ್ರಮಂದಿರ ತೆರೆಯಲು ಅನುವು ಮಾಡಿಕೊಡಬೇಕು ಎಂದು ವಿನಂತಿಸಿದೆ.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್ ಕುಮಾರ್ ''ಚಿತ್ರರಂಗದ ಸಮಸ್ಯೆಗೆ ಬಗ್ಗೆ ಸಿಎಂ ಸ್ಪಂದಿಸಿದ್ದಾರೆ. ಲಾಕ್ ಡೌನ್ ನಿಂದ ಸಿನಿ ಕ್ಷೇತ್ರಕ್ಕೆ ಬಹಳ ನಷ್ಟವಾಗಿದೆ. ಸಿನಿಮಾ ಥಿಯೇಟರ್ ಬಗ್ಗೆ ಚರ್ಚೆ ಮಾಡಿದ್ದೇವೆ. ಥಿಯೇಟರ್ ಓಪನ್ ಬಗ್ಗೆ ಕೇಂದ್ರದ ಮಾರ್ಗಸೂಚಿಯಂತೆ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.
ಚಿತ್ರರಂಗದ ಸಮಸ್ಯೆಗಳಿಗೆ ಒಮ್ಮೆಲೆ ಪರಿಹಾರ; ಸಿಎಂ ಜತೆ ಡಿಸಿಎಂ ಚರ್ಚೆಯ ಭರವಸೆ
''ಸಿನಿಮಾ ಥಿಯೇಟರ್ ಓಪನ್ ಮಾಡೋದು ದೊಡ್ಡದಲ್ಲ. ಆದರೆ ಎಷ್ಟು ಜನರ ನಿರ್ಮಾಪಕರು ರೆಡಿಯಾಗಿದ್ದಾರೆ ಎಂಬುದು ಗಮನಿಸಬೇಕು. ಈ ಬಗ್ಗೆ ನಾವು ಮೊದಲು ಚರ್ಚೆ ಮಾಡಿ ತೀರ್ಮಾನ ಮಾಡ್ತೇವೆ. ನಮ್ಮ ಸಮಸ್ಯೆ ಬಗ್ಗೆ ಸಿಎಂ ಬಳಿ ಕೇಳಿಕೊಂಡಿದ್ದೇವೆ. ಆ ಸಮಸ್ಯೆಗೆ ಪರಿಹಾರ ಒದಗಿಸುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ'' ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಶಿವರಾಜ್ ಕುಮಾರ್, ತಾರಾ ಅನುರಾಧ, ಸಾ.ರಾ.ಗೋವಿಂದು, ನಟ ಯಶ್ ಮತ್ತು ದುನಿಯಾ ವಿಜಯ್ ಹಾಗೂ ನಿರ್ಮಾಪಕ, ನಿರ್ದೇಶಕರುಗಳು ಭಾಗಿಯಾಗಿದ್ದರು.