Just In
- 3 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 3 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 4 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 6 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿನಿಮಾ ಛಾಯಾಗ್ರಾಹಕ ಅರುಣ್ ಕುಮಾರ್ ನಿಧನ
ಸಿನಿಮಾ ಛಾಯಾಗ್ರಾಹಕ ಅರುಣ್ ಕುಮಾರ್ ನಿನ್ನೆ (ನವೆಂಬರ್ 30) ಸಂಜೆ ನಿಧನ ಹೊಂದಿದ್ದಾರೆ. ಕಳೆದ ಕೆಲವು ಸಮಯದಿಂದ ಬ್ರೇನ್ ಟ್ಯೂಮರ್ ನಿಂದ ಬಳಲುತ್ತಿದ್ದ 51 ವರ್ಷದ ಅರುಣ್ ಕುಮಾರ್ ನಿನ್ನೆ ಲೋ ಬಿಪಿಯಿಂದ ಇಹಲೋಕ ತ್ಯಜಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗೆ ರಿಲೀಸ್ ಆದ 'ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು' ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಅರುಣ್ ಕುಮಾರ್ ಹೆಚ್ಚು ಸುದ್ದಿ ಮಾಡಿದ್ದರು. ಅಶೋಕ್ ಕಡಬ ನಿರ್ದೇಶನದ ಸಿನಿಮಾ ಇದಾಗಿದೆ. ಸಿನಿಮಾದ ಚಿತ್ರೀಕರಣ ವೇಳೆ ತಲೆನೋವು ಎನ್ನುತ್ತಿದ್ದರು, ಆದರೆ ಹೆಚ್ಚು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಕಿಡ್ನಿ ವೈಫಲ್ಯದಿಂದ ಕಿರುತೆರೆ ಖ್ಯಾತ ನಟಿ ಲೀನಾ ಆಚಾರ್ಯ ನಿಧನ
ಅರುಣ್ ಕುಮಾರ್ ಕಳೆದ ಒಂದು ವಾರದಿಂದ ತುಂಬ ತಲೋನೋವಿನಿಂದ ಬಳಲುತ್ತಿದ್ದರಂತೆ. ಬೆಂಗಳೂರಿನಲ್ಲಿ ಪರಿಕ್ಷೆ ನಡೆಸಿ, ಬಳಿಕ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಗಲೇ ಬ್ರೇನ್ ಟ್ಯೂಮರ್ ಅಂತಿಮ ಹಂತ ತಲುಪಿತ್ತು. ಅಲ್ಲದೆ ಕೊರೊನಾ ಪಾಸಿಟಿವ್ ಸಹ ಬಂದಿತ್ತು ಎಂದು ಹೇಳಲಾಗುತ್ತಿದೆ.
ಬೀರೂರಿನವರಾದ ಅರುಣ್ ಕುಮಾರ್, ಸುಮಾರು 30ಕ್ಕು ಅಧಿಕ ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಅರುಣ್ ಕುಮಾರ್ ಮೂವರು ಮಕ್ಕಳು ಮತ್ತು ಪತ್ನಿ ಸರಸ್ವತಿಯನ್ನು ಅಗಲಿದ್ದಾರೆ. ಮೊದಲ ಪುತ್ರ ಸೌಂಡ್ ಇಂಜಿನಿಯರಿಂಗ್ ಕೋರ್ಸ್ ಮಾಡುತ್ತಿದ್ದಾರ, ಕಿರಿಯ ಪುತ್ರ ಸ್ಟುಡಿಯೋ ಯೂನಿಟ್ ನೋಡಿಕೊಳ್ಳುತ್ತಿದ್ದಾರೆ. ಇನ್ನು ಮಗಳ ಮದುವೆ ತಯಾರಿಯಲ್ಲಿದ್ದ ಅರುಣ್ ಕುಮಾರ್ ಮಗಳ ಮದುವೆ ನೋಡುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ.
ಅರುಣ್ ಕುಮಾರ್ ಕನ್ನಡ ಮಾತ್ರವಲ್ಲದೆ ಹಿಂದಿ, ಮರಾಠಿ ಮತ್ತು ಗುಜರಾತಿ ಚಿತ್ರಗಳಿಗೂ ಕೆಲಸ ಮಾಡಿದ್ದಾರೆ. ಗುಜರಾತಿನಲ್ಲಿ ಶ್ರೇಷ್ಠ ಛಾಯಾಗ್ರಾಹಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಛಾಯಾ ಎನ್ನುವ ಸಿನಿಮಾಗೆ ಸದ್ಯ ಅರುಣ್ ಕುಮಾರ್ ಕೆಲಸ ಮಾಡುತ್ತಿದ್ದರು. ಈ ಸಿನಿಮಾ ಇನ್ನು ರಿಲೀಸ್ ಆಗಬೇಕಿದೆ.