Don't Miss!
- News Neha Hiremath: ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ವಿಎಚ್ಪಿ ಒತ್ತಾಯ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಛಾಯಾಗ್ರಾಹಕ ಅರುಣ್ ಕುಮಾರ್ ನಿಧನ
ಸಿನಿಮಾ ಛಾಯಾಗ್ರಾಹಕ ಅರುಣ್ ಕುಮಾರ್ ನಿನ್ನೆ (ನವೆಂಬರ್ 30) ಸಂಜೆ ನಿಧನ ಹೊಂದಿದ್ದಾರೆ. ಕಳೆದ ಕೆಲವು ಸಮಯದಿಂದ ಬ್ರೇನ್ ಟ್ಯೂಮರ್ ನಿಂದ ಬಳಲುತ್ತಿದ್ದ 51 ವರ್ಷದ ಅರುಣ್ ಕುಮಾರ್ ನಿನ್ನೆ ಲೋ ಬಿಪಿಯಿಂದ ಇಹಲೋಕ ತ್ಯಜಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗೆ ರಿಲೀಸ್ ಆದ 'ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು' ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಅರುಣ್ ಕುಮಾರ್ ಹೆಚ್ಚು ಸುದ್ದಿ ಮಾಡಿದ್ದರು. ಅಶೋಕ್ ಕಡಬ ನಿರ್ದೇಶನದ ಸಿನಿಮಾ ಇದಾಗಿದೆ. ಸಿನಿಮಾದ ಚಿತ್ರೀಕರಣ ವೇಳೆ ತಲೆನೋವು ಎನ್ನುತ್ತಿದ್ದರು, ಆದರೆ ಹೆಚ್ಚು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಕಿಡ್ನಿ ವೈಫಲ್ಯದಿಂದ ಕಿರುತೆರೆ ಖ್ಯಾತ ನಟಿ ಲೀನಾ ಆಚಾರ್ಯ ನಿಧನ
ಅರುಣ್ ಕುಮಾರ್ ಕಳೆದ ಒಂದು ವಾರದಿಂದ ತುಂಬ ತಲೋನೋವಿನಿಂದ ಬಳಲುತ್ತಿದ್ದರಂತೆ. ಬೆಂಗಳೂರಿನಲ್ಲಿ ಪರಿಕ್ಷೆ ನಡೆಸಿ, ಬಳಿಕ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಗಲೇ ಬ್ರೇನ್ ಟ್ಯೂಮರ್ ಅಂತಿಮ ಹಂತ ತಲುಪಿತ್ತು. ಅಲ್ಲದೆ ಕೊರೊನಾ ಪಾಸಿಟಿವ್ ಸಹ ಬಂದಿತ್ತು ಎಂದು ಹೇಳಲಾಗುತ್ತಿದೆ.
ಬೀರೂರಿನವರಾದ ಅರುಣ್ ಕುಮಾರ್, ಸುಮಾರು 30ಕ್ಕು ಅಧಿಕ ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಅರುಣ್ ಕುಮಾರ್ ಮೂವರು ಮಕ್ಕಳು ಮತ್ತು ಪತ್ನಿ ಸರಸ್ವತಿಯನ್ನು ಅಗಲಿದ್ದಾರೆ. ಮೊದಲ ಪುತ್ರ ಸೌಂಡ್ ಇಂಜಿನಿಯರಿಂಗ್ ಕೋರ್ಸ್ ಮಾಡುತ್ತಿದ್ದಾರ, ಕಿರಿಯ ಪುತ್ರ ಸ್ಟುಡಿಯೋ ಯೂನಿಟ್ ನೋಡಿಕೊಳ್ಳುತ್ತಿದ್ದಾರೆ. ಇನ್ನು ಮಗಳ ಮದುವೆ ತಯಾರಿಯಲ್ಲಿದ್ದ ಅರುಣ್ ಕುಮಾರ್ ಮಗಳ ಮದುವೆ ನೋಡುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ.
Recommended Video
ಅರುಣ್ ಕುಮಾರ್ ಕನ್ನಡ ಮಾತ್ರವಲ್ಲದೆ ಹಿಂದಿ, ಮರಾಠಿ ಮತ್ತು ಗುಜರಾತಿ ಚಿತ್ರಗಳಿಗೂ ಕೆಲಸ ಮಾಡಿದ್ದಾರೆ. ಗುಜರಾತಿನಲ್ಲಿ ಶ್ರೇಷ್ಠ ಛಾಯಾಗ್ರಾಹಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಛಾಯಾ ಎನ್ನುವ ಸಿನಿಮಾಗೆ ಸದ್ಯ ಅರುಣ್ ಕುಮಾರ್ ಕೆಲಸ ಮಾಡುತ್ತಿದ್ದರು. ಈ ಸಿನಿಮಾ ಇನ್ನು ರಿಲೀಸ್ ಆಗಬೇಕಿದೆ.