Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಶಿವರಾಜ್ ಕುಮಾರ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ
ಬೆಂಗಳೂರಿನಲ್ಲಿ ಟ್ರಾಫಿಕ್ ನಿಂದ ತೊಂದರೆ ಅನುಭವಿಸದವರೇ ಇಲ್ಲ.! ಇನ್ನು ನಟ ಶಿವರಾಜ್ ಕುಮಾರ್ ಕೂಡ ಟ್ರಾಫಿಕ್ ನಿಂದ ಹೈರಾಣಾಗಿ ಹೋಗಿದ್ದಾರೆ. ಜೊತೆಗೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಶಿವಣ್ಣ ಮನವಿ ಮಾಡಿದ್ದರು.
ನಟ ಶಿವರಾಜ್ ಕುಮಾರ್ ಮನವಿಗೆ ಇದೀಗ ರಾಜ್ಯ ಸರ್ಕಾರ ಸ್ಪಂದಿಸಿದೆ. ಶಿವಣ್ಣ ನಿವಾಸದ ಬಳಿಯ ಮಾನ್ಯತಾ ಟೆಕ್ ಪಾರ್ಕ್ ಸುತ್ತ ಮುತ್ತ ಭೇಟಿ ನೀಡಿದ್ದ ಸಚಿವ ರಾಮಲಿಂಗಾರೆಡ್ಡಿ ಈಗ ಸೂಕ್ತ ಕ್ರಮವನ್ನು ಕೈಗೊಂಡಿದ್ದಾರೆ. ಮುಂದೆ ಓದಿ...
ಶಿವಣ್ಣ ಮನವಿ
ಮೂರು ದಿನಗಳ ಹಿಂದೆ ಶಿವರಾಜ್ ಕುಮಾರ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಹೆಬ್ಬಾಳ ಸಮೀಪದ ಮಾನ್ಯತಾ ಟೆಕ್ ಪಾರ್ಕ್ ಬಳಿಯ ಸಂಚಾರ ದಟ್ಟಣೆಯ ಬಗ್ಗೆ ಅಲ್ಲಿನ ನಿವಾಸಿಗಳ ಪರವಾಗಿ ವಿವರಿಸಿದ್ದರು.
ಏಕಮುಖ ಸಂಚಾರ
ಶಿವಣ್ಣ ಮನವಿಗೆ ಇದೀಗ ಸರ್ಕಾರ ಸ್ಪಂದಿಸಿದೆ. ಜೊತೆಗೆ ''ಈ ಭಾಗದಲ್ಲಿ ಸಂಜೆ 5.30 ರಿಂದ 8.30ರ ಅವಧಿಯಲ್ಲಿ ಏಕಮುಖ ಸಂಚಾರವನ್ನು ನಿಗದಿ ಪಡಿಸಲಾಗಿದೆ'' ಎಂದು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹೇಳಿದ್ದಾರೆ.
ಶಿವಣ್ಣನ ಹೇರ್ ಸ್ಟೈಲ್ ನ ಫಾಲೋ ಮಾಡಿದ್ರಂತೆ ಡಾ.ರಾಜ್, ಯಾವ ಚಿತ್ರದಲ್ಲಿ?
ಜನರಿಗೆ ಸಮಸ್ಯೆಯಾಗಬಾರದು
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಶಿವಣ್ಣ ''ಇದು ನಮ್ಮ ವೈಯಕ್ತಿಕ ವಿಚಾರವಲ್ಲ. ಯಾರಿಗೂ ತೊಂದರೆಯಾಗದಂತೆ ಎಲ್ಲರೂ ಆರಾಮಾಗಿ ಇರಬೇಕು ಎನ್ನುವುದು ನಮ್ಮ ದೃಷ್ಟಿ. ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಯಾವುದು ಆರೋಪ ಮಾಡ್ತಿಲ್ಲ. ಟೆಕ್ ಪಾರ್ಕಿನಿಂದ ಬರುವ ವಾಹನಗಳು ಇಲ್ಲಿ ಕೆಲವು ಗಂಟೆಗಳ ಕಾಲ ಸಂಚರಿಸುತ್ತವೆ. ಸಂಚಾರ ದಟ್ಟಣೆಯಿಂದ ಜನರಿಗೆ ಸಮಸ್ಯೆಯಾಗಬಾರದು ಎಂಬ ಉದ್ದೇಶ ಅಷ್ಟೇ'' ಎಂದು ಪ್ರತಿಕ್ರಿಯಿಸಿದ್ದರು.
ಅಭಿಮಾನಿಗಳ ಅಭಿಮಾನಕ್ಕೆ ತಲೆ ಬಾಗಿದ 'ಕರುನಾಡ ಚಕ್ರವರ್ತಿ'
34,095ಕ್ಕೂ ಅಧಿಕ ವಾಹನಗಳ ಓಡಾಟ
ಈ ಭಾಗದ ಟ್ರಾಫಿಕ್ ಸಮಸ್ಯೆ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್, ''ಮಾನ್ಯತಾ ಟೆಕ್ ಪಾರ್ಕಿನಲ್ಲಿ ಸುಮಾರು 53 ಕಂಪನಿಗಳಿದ್ದು, ಸಾವಿರಾರು ಉದ್ಯೋಗಿಗಳು ದಿನನಿತ್ಯ ಇಲ್ಲಿ ಸಂಚರಿಸುತ್ತಾರೆ. 19,787 ದ್ವಿಚಕ್ರ ವಾಹನಗಳು, 9,387 ಕಾರುಗಳು, 4,499 ಕ್ಯಾಬ್ಸ್, 303 ಟೆಂಪೋ ಟ್ರಾವೆಲ್ಲರ್ಸ್, 24 ಕಂಪನಿ ಬಸ್ ಗಳು, 95 ಬಿಎಂಟಿಸಿ ಸೇರಿದಂತೆ 5 ರಿಂದ 9 ಗಂಟೆ ಅವಧಿಯಲ್ಲಿ ಒಟ್ಟು 34,095ಕ್ಕೂ ಅಧಿಕ ವಾಹನಗಳು ಓಡಾಡುತ್ತವೆ'' ಎಂದರು.
ಮಾಸ್ ಕಿಂಗ್ ಶಿವಣ್ಣನಿಗೆ ಯೋಗರಾಜ್ ಭಟ್ ಹೊಸ ಸಿನಿಮಾ.!
ತಾತ್ಕಾಲಿಕ ವ್ಯವಸ್ಥೆ
ಮಾನ್ಯತಾ ಟೆಕ್ ಪಾರ್ಕಿನ ಗೇಟ್ ನಂ. 1, 2 ಹಾಗೂ 3ರಿಂದ ಹಾದು ಗೇಟ್ 05 ರಿಂದ ಹೊರ ಹೋಗುತ್ತವೆ. ಗೇಟ್ 3 ಹಾಗೂ 05ರ ಭಾಗದಲ್ಲಿ ವಸತಿ ಸಮುಚ್ಚಯಗಳಿವೆ. ಪ್ರತಿನಿತ್ಯ ಸಂಚಾರ ದಟ್ಟಣೆಯಿಂದ ಸ್ಥಳೀಯರಿಗೆ ಭಾರಿ ತೊಂದರೆಯಾಗುತ್ತಿದೆ. ಗೇಟ್ 03 ಹಾಗೂ 05 ರ ಭಾಗದಲ್ಲಿ ಸಂಜೆ 5.30 ರಿಂದ 8.30ರ ಅವಧಿಯಲ್ಲಿ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಇದು ತಾತ್ಕಾಲಿಕ ವ್ಯವಸ್ಥೆಯಾಗಿದೆ.