Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಕೆ.ಮಂಜು-ಪೊಲೀಸರ ನಡುವೆ ಮಾತಿನ ಚಕಮಕಿ?
ಸಣ್ಣ ವಿಷಯಕ್ಕೆ ನಿರ್ಮಾಪಕ ಕೆ.ಮಂಜು ಹಾಗೂ ಪೊಲೀಸರ ನಡುವೆ ಇಂದು ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
Recommended Video
ಇಂದು ನಿರ್ಮಾಪಕ ಕೆ.ಮಂಜು ಅವರು ಚಲಾಯಿಸುತ್ತಿದ್ದ ಬೈಕ್ ಅನ್ನು ಪೊಲೀಸರು ತಡೆದಿದ್ದು, ಆ ಸಂದರ್ಭದಲ್ಲಿ ಕೆ.ಮಂಜು ಅವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.
ಪೊಲೀಸರ ವರ್ತನೆ ಬಗ್ಗೆ ಸಿಟ್ಟಾದ ಟಗರು ಮಾನ್ವಿತಾ ಪುಟ್ಟಿ
ಕೆ.ಮಂಜು ಅವರು ಇಂದು ಮಧ್ಯಾಹ್ನ ತಮ್ಮ ಬೈಕ್ ನಲ್ಲಿ ಹೊರಗೆ ಬಂದಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಪೊಲೀಸರು ಕೆ.ಮಂಜು ಅವರು ಬೈಕ್ ಅನ್ನು ತಡೆದು ಪ್ರಶ್ನೆ ಮಾಡಿದ್ದಾರೆ.
ಗಾಡಿಯನ್ನು ಠಾಣೆಗೆ ಹೊತ್ತೊಯ್ದ ಪೊಲೀಸರು
ಇದರಿಂದ ಸಿಟ್ಟಾದ ಕೆ.ಮಂಜು ಪೊಲೀಸರಿಗೆ ತಮ್ಮ ಪರಿಚಯ ಹೇಳಿಕೊಂಡು ಏರಿದ ಧ್ವನಿಯಲ್ಲಿ ಮಾತನಾಡಿದ್ದಾರೆ. ಪೊಲೀಸರು ಸಹ ಜೋರಾಗಿಯೇ ಮಾತನಾಡಿ ಮಂಜು ಅವರ ಗಾಡಿಯನ್ನು ಪೊಲೀಸ್ ಠಾಣೆಗೆ ಹೊತ್ತೊಯ್ದಿದ್ದಾರೆ.
ಓಡಾಡದಂತೆ ಎಚ್ಚರಿಕೆ ನೀಡಿದ ಪೊಲೀಸರು
ಇದರಿಂದ ಇನ್ನಷ್ಟು ಸಿಟ್ಟಿಗೆ ಒಳಗಾದ ಕೆ.ಮಂಜು ಠಾಣೆಗೆ ಹೋಗಿ ಅಲ್ಲಿಯೂ ಏರಿದ ಧ್ವನಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಕೊನೆಗೆ ದಾಖಲೆಗಳನ್ನು ತೋರಿಸಿದ ನಂತರ ಪೊಲೀಸರು ಬೈಕ್ ಅನ್ನು ಬಿಟ್ಟು ಕಳುಹಿಸಿದ್ದಾರೆ. ಜೊತೆಗೆ ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡದಂತೆ ಎಚ್ಚರಿಕೆ ಸಹ ನೀಡಿದ್ದಾರೆ.
ಚಿರಂಜೀವಿ ಸರ್ಜಾ ಗೆ ಏನಾಯಿತು? ನಿರ್ಮಾಪಕ ಕೆ.ಮಂಜು ನೀಡಿದ ಮಾಹಿತಿ
ಇನ್ಸ್ಪೆಕ್ಟರ್ ಪರಿಚಯ ಇದ್ದರು ಎಂದ ಮಂಜು
ಘಟನೆ ಬಗ್ಗೆ ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿರುವ ಕೆ.ಮಂಜು ಮಧ್ಯಾಹ್ನದ ವೇಳೆ ಬ್ಯಾಂಕಿಗೆ ಹೋಗುವಾಗ ಪೊಲೀಸರು ವಾಹನ ಅಡ್ಡಗಟ್ಟಿದರು. ಪೊಲೀಸ್ ಇನ್ಸ್ಪೆಕ್ಟರ್ ನನಗೆ ಪರಿಚಯದವರೇ ಆಗಿದ್ದರು, ದಾಖಲೆ ಕೊಟ್ಟ ನಂತರ ಗಾಡಿ ಬಿಟ್ಟರು ಎಂದು ಹೇಳಿದ್ದಾರೆ.
ಒಂದು ವಾರಗಳ ಕಾಲ ಲಾಕ್ಡೌನ್
ಬೆಂಗಳೂರು ನಗರ ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಘೋಷಿಸಲಾಗಿದೆ. ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಓಡಾಡಲು ಅವಕಾಶ ನೀಡಲಾಗಿದ್ದು, 12 ಗಂಟೆ ನಂತರ ಓಡಾಡಿದರೆ ದಂಡ ವಿಧಿಸಲಾಗುತ್ತಿದೆ.