Don't Miss!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Automobiles Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರ್ಚ್ 03 'ವಿಶ್ವ ಕನ್ನಡ ಸಿನಿಮಾ ದಿನ': ಸಿಎಂ ಘೋಷಣೆ
ಮಾರ್ಚ್ 03 ಅನ್ನು 'ವಿಶ್ವ ಕನ್ನಡ ಸಿನಿಮಾ ದಿನ'ವನ್ನಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೋಷಿಸಿದರು.
13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡ ಸಿನಿಮಾದಲ್ಲಿ ಮಾರ್ಚ್ 03 ಮಹತ್ವದ ದಿನವಾಗಿದ್ದು ಈ ದಿನವನ್ನು ವಿಶ್ವ ಕನ್ನಡ ಸಿನಿಮಾ ದಿನವನ್ನಾಗಿ ಆಚರಿಸಲಾಗುವುದು ಎಂದರು.
13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ!
ಇಂದಿಗೆ ಸರಿಯಾಗಿ 88 ವರ್ಷಗಳ ಹಿಂದೆ 1934 ರಲ್ಲಿ ಮಾರ್ಚ್ 03ರಂದೇ ಕನ್ನಡದ ಮೊದಲ ಸಿನಿಮಾ 'ಸತಿ ಸುಲೋಚನಾ' ಬಿಡುಗಡೆ ಆಗಿತ್ತು. ಹಾಗಾಗಿ ಇದೇ ದಿನವನ್ನು 'ವಿಶ್ವ ಕನ್ನಡ ದಿನ'ವನ್ನಾಗಿ ಘೋಷಿಸಲಾಗಿದೆ.
ಸಮಾರಂಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ''ಕನ್ನಡ ಚಿತ್ರರಂಗ ಉಳಿಯಬೇಕಾದರೆ ವಿಶೇಷ ಶ್ರಮವನ್ನು ನಾವು ಹಾಕಬೇಕಾಗುತ್ತೆ. 'ಸ್ಪೆಶಲ್ ಎಫೆಕ್ಟ್' ಜೊತೆಗೆ 'ಸ್ಪೆಷಲ್ ಎಫರ್ಟ್' ಸಹ ಬೇಕು. ಕನ್ನಡ ಉಳಿಸಲು ಸಿನಿಮಾಗಳ ಅಗತ್ಯವೂ ಇದೆ. ಪ್ರಸ್ತುತ ಹಲವು ಚಿತ್ರಂದಿರಗಳು ಮುಚ್ಚುತ್ತಿವೆ. ಚಿತ್ರಮಂದಿರಗಳು ಉಳಿಯಲು ಹೊಸ ತಂತ್ರಜ್ಞಾನದ ಚಿತ್ರರಂಗ ದೊರೆಯಬೇಕು. ಕುಟುಂಬದವರು ಮತ್ತೆ ಒಟ್ಟಾಗಿ ಬಂದು ಸಿನಿಮಾ ನೋಡುವಂತೆ ಮಾಡಬೇಕು. ಇದಕ್ಕೆ ಸರ್ಕಾರ ಎಲ್ಲರೀತಿಯ ಸಹಕಾರ ನಿಡಲಿದೆ ಎಂದು ಭರವಸೆಯನ್ನು ನೀಡಿದರು.
'ಪೆದ್ರೊ'ಗೆ ಅವಕಾಶ ನಿರಾಕರಿಸಿದ್ದು ಏಕೆ? ಸಿನಿಮೋತ್ಸವದಿಂದ ಹೊರಗುಳಿದ ಕನ್ನಡ ಸಿನಿಮಾಗಳಾವುವು?
ಅಗಲಿದ ನಟ ಪುನೀತ್ ರಾಜ್ಕುಮಾರ್ ಅವರನ್ನು ನೆನೆದ ಸಿಎಂ, ''ಪುನೀತ್ ರಾಜ್ಕುಮಾರ್ ಅವರು, ಸಮಾಜಕ್ಕೆ ಮತ್ತು ಚಲನಚಿತ್ರ ರಂಗಕ್ಕೆ ಕೊಟ್ಟ ಕೊಡುಗೆ ದೊಡ್ಡದು, ಅವರ ಕೊಡುಗೆ ಶಾಶ್ವತವಾಗಿ ಉಳಿಯಲಿದೆ. ಪುನೀತ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನಿಡಲು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಮೈಸೂರಿನಲ್ಲಿ ಚಿತ್ರನಗರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ'' ಎಂದರು. ಜೊತೆಗೆ ಪುಟ್ಟಣ್ಣ ಕಣಗಾಲ್ ನಿವಾಸವನ್ನು ಸ್ಮಾರಕ ಮಾಡುವ ಬಗ್ಗೆಯೂ ಚರ್ಚಿಸುವುದಾಗಿ ಹೇಳಿದರು.
ಮಾರ್ಚ್ 3ಕ್ಕೆ ಬೆಂಗಳೂರು ಸಿನಿಮೋತ್ಸವಕ್ಕೆ ಚಾಲನೆ: ದರ್ಶನ್ ಅತಿಥಿ, ಹಲವು ವಿಶೇಷತೆಗಳು
ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವವನ್ನು ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಭಾರತಿ ವಿಷ್ಣುವರ್ಧನ್, ಮಲಯಾಳಂ ಚಿತ್ರರಂಗದ ನಿರ್ದೇಶಕ ಪ್ರಿಯದರ್ಶನ್ ಇತರರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಿದ್ದರು. ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಮುನಿರತ್ನ ಅವರುಗಳು ಸಹ ಹಾಜರಿದ್ದರು.