Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
11ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ಸಿಎಂ
2019ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮದ ಉದ್ಘಾಟನೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆದಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ನಟ ಅನಂತ್ ನಾಗ್ ಹಾಗೂ ರಾಹುಲ್ ರವೈಲ್ ಆಗಮಿಸಿದ್ದರು. ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಬಾರಿಯ ಚಲನಚಿತ್ರೋತ್ಸವ ನಡೆದಿದೆ. ನಟಿ ಹರ್ಷಿಕಾ ಪೂಣಚ್ಚ ಸಹ ಹಾಜರಿದ್ದರು.
ಫೆಬ್ರವರಿ 21 ರಿಂದ ಫೆಬ್ರವರಿ 28ರ ವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಬಾಂಬ್, ಎ ಲವ್ ಸ್ಟೋರಿ ( ಇರಾನ್, ಪರ್ಷಿಯನ್ ಭಾಷೆಯ) ಚಿತ್ರವನ್ನ ಚಿತ್ರೋತ್ಸವದ ಮೊದಲನೆಯ ಚಿತ್ರವಾಗಿ ಇಂದು ಪ್ರದರ್ಶನ ಮಾಡಲಾಗುತ್ತಿದೆ. ಒಟ್ಟು ಸುಮಾರು 225 ಚಿತ್ರಗಳು ಪ್ರದರ್ಶನವಾಗಲಿವೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅನಂತ್ ನಾಗ್ ''ಬೆಂಗಳೂರಿನ ಯುವತಿ ಯುವಕರು ಈ ಚಿತ್ರೋತ್ಸವದಲ್ಲಿ ಭಾಗವಹಿಸಿ ಸ್ಪೂರ್ತಿ ಪಡೆಯಲಿ. ನಿರ್ಮಾಪಕರಿಗೆ ಕಷ್ಟಗಳು ಇವೆ ಅಂತ ನಾಗತಿಹಳ್ಳಿ ಅವರು ಸಿಎಂ ಮುಂದೇ ಇಟ್ಟಿದ್ದಾರೆ. ಅವರು ಆ ಸಮಸ್ಯೆಗಳನ್ನ ಬಗೆಹರಿಸುತ್ತಾರೆ ಅನ್ನುವ ನಂಬಿಕೆ ನನಗಿದೆ. ಕುಮಾರಸ್ವಾಮಿ 20 ತಿಂಗಳು ಸಿಎಂ ಆಗಿದ್ದಾಗ ನನಗೆ ಅವರ ಜತೆ ವೇದಿಕೆ ಹಂಚಿಕೊಳ್ಳುವ ಅವಕಾಶ ಸಿಕ್ಕಿರಲಿಲ್ಲ ಈಗ ಸಿಕ್ಕಿದೆ.'' ಎಂದು ಸಂತಸ ವ್ಯಕ್ತ ಪಡಿಸಿದರು.