ಅಂಬರೀಶ್ ಸ್ಮಾರಕದ ಬಗ್ಗೆ ಕುಮಾರಸ್ವಾಮಿ ಮಾತು
ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಅವರ ಅಭಿಮಾನಿಗಳು, ಸ್ನೇಹಿತರು ಪಡೆಯುತ್ತಿದ್ದಾರೆ. ಸದ್ಯ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ.
ಅಂಬರೀಶ್ ಅಂತ್ಯಕ್ರಿಯೆ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ''ಅಂಬರೀಶ್ ಅವರಿಗೆ ಸಹ ಸ್ಮಾರಕ ನಿರ್ಮಾಣ ಮಾಡಲಾಗುವುದು. ಕಂಠೀರವ ಸ್ಟೂಡಿಯೊದಲ್ಲಿ ಸ್ಮಾರಕ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ.'' ಎಂದು ಹೇಳಿದ್ದಾರೆ.
ಕಂಠೀರವ ಸ್ಟೂಡಿಯೊದಲ್ಲಿ ರಾಜ್ ಕುಮಾರ್ ಸಮಾಧಿಯ ಬಳಿಯೇ ಅಂಬರೀಶ್ ಅವರ ಅಂತ್ಯ ಸಂಸ್ಕಾರ ನಡೆಸಲು ನಿರ್ಧಾರ ಮಾಡಿದ್ದು, ರಾಜ್ ಕುಟುಂಬ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದೆ.

ಇಂದು ನಾಲ್ಕು ಗಂಟೆ ಸುಮಾರಿಗೆ ಏರ್ ಲಿಫ್ಟ್ ಮೂಲಕ ಮಂಡ್ಯಗೆ ಪಾರ್ಥಿವ ಶರೀರ ರವಾನೆ ಆಗಲಿದೆ. ಸಂಜೆಯಿಂದ ನಾಳೆ ಬೆಳಗ್ಗೆ ಆರು ಗಂಟೆವರೆಗೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ನಾಳೆ ಮತ್ತೆ ಮೈಸೂರಿನಿಂದ ಬೆಂಗಳೂರಿಗೆ ಅಂಬರೀಶ್ ಮೃತ ದೇಹವನ್ನು ತೆಗೆದುಕೊಂಡು ಬಂದು ಕಂಠೀರವ ಸ್ಟೂಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.


Click it and Unblock the Notifications











