Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಸ್ಮಾರಕ ವಿಚಾರದಲ್ಲಿ ಗೊಂದಲ ಬೇಡ: ಸಿಎಂ ಟ್ವೀಟ್
Recommended Video
ಡಾ ವಿಷ್ಣು ಸ್ಮಾರಕ ವಿಚಾರವಾಗಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳನ್ನ ಗಮನಿಸಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವಿಟ್ಟರ್ ಮೂಲಕ ಮತ್ತೊಮ್ಮೆ ಸಮಾಧಾನದ ಮಾತುಗಳನ್ನಾಡಿದ್ದಾರೆ.
ಅಂಬರೀಶ್ ನಿಧನ ವೇಳೆ, ಮುಖ್ಯಮಂತ್ರಿ ನೀಡಿದ್ದ ಹೇಳಿಕೆಯಿಂದ ಅಭಿಮಾನಿ ಮತ್ತು ಕುಟುಂಬ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿ, ಸಿಎಂ ವಿರುದ್ಧ ವಿಷ್ಣು ಅಳಿಯ ಅನಿರುದ್ದ್ ಕಿಡಿಕಾರಿದ್ದರು.
'ನಮ್ಮ ತಂದೆಗೆ ಅನ್ಯಾಯವಾಗ್ತಿದೆ': ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ವಿಷ್ಣು ಪುತ್ರಿ
ರಾಜ್ ಕುಮಾರ್, ಅಂಬರೀಶ್ ಹಾಗೂ ವಿಷ್ಣುವರ್ಧನ್ ಅವರ ಸ್ಮಾರಕವನ್ನ ಒಂದೆ ಕಡೆ ಇರಲಿ ಎಂಬ ಚಿಂತನೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಇದಕ್ಕೆ ಒಪ್ಪದ ಅನಿರುದ್ಧ್ ಸಿಎಂ ವಿರುದ್ಧ ಹರಿಹಾಯ್ದಿದ್ದರು.
ಕಂಠೀರವ ಸ್ಟುಡಿಯೋಗೆ ವಿಷ್ಣು ಸ್ಮಾರಕ ಸ್ಥಳಾಂತರ ಖಂಡಿತ ಆಗಲ್ಲ, ಯಾಕೆ.?
'ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಿ' ಎಂದು ಆಕ್ರೋಶ ಹೊರಹಾಕಿದ್ದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಭಾರತಿ ವಿಷ್ಣುವರ್ಧನ್, 'ಮೈಸೂರಲ್ಲಿ ಸ್ಮಾರಕ ಕೆಲಸ ಆರಂಭವಾಗಿದೆ. ಅಲ್ಲಿ ಉಂಟಾಗಿಸರುವ ಸಮಸ್ಯೆ ಬಗೆಹರಿಸಿಕೊಟ್ಟರೇ ಸಾಕು. ಅಭಿಮಾನ್ ಸ್ಟುಡಿಯೋದಲ್ಲಿ ಪುಣ್ಯ ಭೂಮಿ ಆದರೂ ಸಂತಸವೇ, ಅಥವಾ ಅಭಿಮಾನ್ ಸ್ಡುಡಿಯೋದಲ್ಲೇ ಸ್ಮಾರಕ ಮಾಡುವುದಾದರೇ ಆಗಲಿ' ಎಂದಿದ್ದರು.
ವಿಷ್ಣು ಅಳಿಯ ಅನಿರುದ್ಧ್ ಮಾತಿಗೆ ಆಕ್ರೋಶಗೊಂಡ ಸಿಎಂ ಕುಮಾರಸ್ವಾಮಿ
ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ.
— CM of Karnataka (@CMofKarnataka) November 29, 2018
ಇದೀಗ, ಮತ್ತೆ ಈ ವಿಷ್ಯದ ಬಗ್ಗೆ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಮಾತನಾಡಿದ್ದು, ''ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ''ಎಂದಿದ್ದಾರೆ.