Don't Miss!
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕುಮಾರ್ ಜನ್ಮದಿನಾಚರಣೆ: ಸಿಎಂ ಯಡಿಯೂರಪ್ಪ ಶುಭ ಕೋರಿದ್ದು ಹೀಗೆ
ಡಾ.ರಾಜ್ ಅಭಿಮಾನಿಗಳಿಗೆ ಇಂದು ಹಬ್ಬದ ಸಂಭ್ರಮ. ಅಭಿಮಾನಿಗಳ ಆರಾಧ್ಯದೈವ ವರನಟ, ನಟಸಾರ್ವಭೌಮ ಡಾ.ರಾಜ್ ಕುಮಾರ್ 91ನೇ ಜನ್ಮದಿನಾಚರಣೆ ಸಂಭ್ರಮ. ಪ್ರತೀವರ್ಷ ರಾಜ್ ಕುಮಾರ್ ಹುಟ್ಟುಹಬ್ಬವನ್ನು ರಾಜ್ಯದಾದ್ಯಂತ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು.
ಅಭಿಮಾನಿಗಳು ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು. ಆದರೆ ಈ ವರ್ಷ ರಾಜ್ ಉತ್ಸವ ನಡೆಯುತ್ತಿಲ್ಲ. ಕೊರೊನಾ ಹಾವಳಿಯ ಪರಿಣಾಮ ಹುಟ್ಟುಹಬ್ಬವನ್ನು ಅದ್ದೂರಿಯಾರಿ ಆಚರಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅಭಿಮಾನಿಗಳು ಮನೆಯಲ್ಲಿಯೇ ಡಾ.ರಾಜ್ ಸ್ಮರಣೆ ಮಾಡುತ್ತಿದ್ದಾರೆ.
Quiz: ಡಾ. ರಾಜ್ ಕುಮಾರ್ ಕುರಿತ 10 ಪ್ರಶ್ನೆಗಳಿಗೆ ನಿಮ್ಮ ಉತ್ತರವೇನು?
ಈಗಾಗಲೆ ಸಾಕಷ್ಟು ಗಣ್ಯರು ರಾಜ್ ಕುಮಾರ್ ಜನ್ಮದಿನಾಚರಣೆಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಕೋರುತ್ತಿದ್ದಾರೆ. ರಾಜ್ಯದ ಸಿಎಂ ಯಡಿಯೂರಪ್ಪ ಸಹ ಡಾ.ರಾಜ್ ಜನ್ಮದಿನಾಚರಣೆಗೆ ವಿಶ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಕೋರಿರುವ ಸಿಎಂ ತಾಯಿ ಭುವನೇಶ್ವರಿಯ ಸೇವೆಗೆ ಕರೆ ಬಂದಾಗಲೆಲ್ಲ ಎದ್ದು ಬಂದ ಮಹಾನುಭಾವ ರಾಜಣ್ಣನವರು. ಎಂದು ಹೇಳಿದ್ದಾರೆ.
"ನಟ ಸಾರ್ವಭೌಮ-ಕರ್ನಾಟಕ ರತ್ನ ಡಾ.ರಾಜ್ ಕುಮಾರ ಜನ್ಮದಿನದಂದು ಕರ್ನಾಟಕಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸೋಣ. ತಾಯಿ ಭುವನೇಶ್ವರಿಯ ಸೇವೆಗೆ ಕರೆ ಬಂದಾಗಲೆಲ್ಲ ಎದ್ದು ಬಂದ ಮಹಾನುಭಾವ ರಾಜಣ್ಣನವರು. ಮೂರು ತಲೆಮಾರಿನ ಕನ್ನಡಿಗರಿಗೆ ಮೌಲ್ಯ ತುಂಬಿದ ಮನರಂಜನೆ ನೀಡಿದ ಅವರನ್ನು ಆದರದಿಂದ ನೆನೆಯೋಣ" ಎಂದು ಹೇಳಿದ್ದಾರೆ.