ಹೆಸರು ಬ್ಯಾಂಕ್ ಜನಾರ್ಧನ್; ಆದರೆ ಬ್ಯಾಂಕ್ ಬ್ಯಾಲೆನ್ಸ್ ಇರಲಿಲ್ಲ

ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಇಹಲೋಕ ತ್ಯಜಿಸಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

800ಕ್ಕೂ ಅಧಿಕ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ಬಣ್ಣ ಹಚ್ಚಿದ್ದರು. ನಾಟಕಗಳಲ್ಲಿ ಕಿರುತೆರೆ ಧಾರಾವಾಹಿಗಳಲ್ಲಿ ಕೂಡ ನಟಿಸಿ ಗೆದ್ದಿದ್ದರು. ಆದರೆ ಆರ್ಥಿಕವಾಗಿ ಹೆಚ್ಚು ಗಳಿಸಲಿಲ್ಲ. ಇವತ್ತಿನ ಪೋಷಕ ಕಲಾವಿದರು ಲಕ್ಷ ಲಕ್ಷ ಸಂಭಾವನೆ ಪಡೆಯುತ್ತಾರೆ. ನಮ್ಮ ಕಾಲದಲ್ಲಿ ಅಷ್ಟೆಲ್ಲಾ ಕೊಡುತ್ತಿರಲಿಲ್ಲ. ನನ್ನ ಹೆಸರಿನಲ್ಲಿ ಬ್ಯಾಂಕ್ ಇದೆ. ಆದರೆ ನನ್ನ ಬ್ಯಾಂಕ್ ಅಕೌಂಟ್‌ನಲ್ಲಿ ಏನಿಲ್ಲ ಎಂದು ಸ್ವತ: ಜನಾರ್ಧನ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

Comedian Bank Janardhan Passes Away at 76 Fans and Film Fraternity Mourn His Loss

ಕೋವಿಡ್ ಸಮಯದಲ್ಲಿ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಸಂಕಷ್ಟ ಎದುರಿಸುವಂತಾಗಿತ್ತು. ಈಗ ಪೋಷಕ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಡುತ್ತಾರೆ. ನಮ್ಮ ಕಾಲದಲ್ಲಿ ಇರಲಿಲ್ಲ, ಆಗ ಸಿನಿಮಾ ನಿರ್ಮಾಣಕ್ಕೆ ಹೆಚ್ಚು ಬಜೆಟ್ ಇರುತ್ತಿರಲಿಲ್ಲ. ಈಗ ನಾವು ಹೆಸರು ಮಾಡಿದ್ದರೆ ಹೆಚ್ಚು ಹಣ ಸಂಪಾದನೆ ಮಾಡಬಹುದಿತ್ತು. ಆ ಸಮಯದಲ್ಲಿ ಹೀರೊ ಸಂಭಾವನೆ 1 ಲಕ್ಷ ರೂ. ಇರ್ತಿತ್ತು. ಇನ್ನು ನಮಗೆ ಎಷ್ಟು ಎಂದು ನೀವೆ ಯೋಚಿಸಿ ಎಂದು ಟಿವಿ9 ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಸಾಕಷ್ಟು ಬಾರಿ ಅವಕಾಶ ಕೊಟ್ಟರೆ ಸಾಕು ಎಂದು ನಟಿಸಿ ಬರುತ್ತಿದ್ದೆ. ನಿರ್ಮಾಪಕರು, ನಿರ್ದೇಶಕರ ಜೊತೆಗಿನ ಉತ್ತಮ ಒಡನಾಟದ ಕಾರಣಕ್ಕೆ ಹಣಕ್ಕೆ ಬೇಡಿಕೆ ಇಡದೇ ನಟಿಸಿ ಬರ್ತಿದ್ದೆ. ಆರಂಭದಲ್ಲಿ ಬ್ಯಾಂಕ್ ಕೆಲಸ ಮಾಡಿಕೊಂಡೇ ಜನಾರ್ಧನ್ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆದರೆ ಅವಕಾಶಗಳು ಹೆಚ್ಚಾದಾಗ ಅನಿವಾರ್ಯವಾಗಿ ಬ್ಯಾಂಕ್ ಕೆಲಸ ಬಿಡಬೇಕಾಯಿತು. 90ರ ದಶಕದ ಆರಂಭದಲ್ಲೇ ಸಿನಿಮಾಗಳಲ್ಲಿ ನಟಿಸೋಕೆ ಆರಂಭಿಸಿದ ಜನಾರ್ಧನ್ 11 ವರ್ಷಗಳ ಬಳಿಕ ಕೆಲಸ ಬಿಟ್ಟು ಸಂಪೂರ್ಣವಾಗಿ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.

ಅವಕಾಶಗಳು ಕಮ್ಮಿ ಆಗಿ ಆರ್ಥಿಕ ಸಮಸ್ಯೆ ಎದುರಾದಾಗ ಬ್ಯಾಂಕ್ ಕೆಲಸ ಬಿಡಬಾರದಿತ್ತು ಎಂದು ಭಾವಿಸಿದ್ದು ಇದೆ. ಹಿರಿಯ ಕಲಾವಿದರಿಗೆ ಪ್ರೋತ್ಸಾಹ ಸಿಗುತ್ತಿಲ್ಲ, ಅವಕಾಶ ಕೊಡುತ್ತಿಲ್ಲ. ಜಗ್ಗೇಶ್, ವಿಷ್ಣುವರ್ಧನ್, ಅಂಬರೀಶ್ ಅವರು ನಮ್ಮನ್ನು ಗಮನಿಸುತ್ತಿದ್ದರು. ತಮ್ಮ ಸಿನಿಮಾಗಳಲ್ಲಿ ಅವಕಾಶ ಕೊಡಿಸುತ್ತಿದ್ದರು. ಇತ್ತೀಚೆಗೆ ಅದು ಇಲ್ಲ ಎಂದು ಬ್ಯಾಂಕ್ ಜನಾರ್ಧನ್ ಬೇಸರ ವ್ಯಕ್ತಪಡಿಸಿದ್ದರು.

ಅಣ್ಣಾವ್ರು ನನ್ನ ಅಭಿಮಾನಿ

'ಶ್' ಸಿನಿಮಾ ನೋಡಿ ಅಣ್ಣಾವ್ರು ಕೂಡ ಬ್ಯಾಂಕ್ ಜನಾರ್ಧನ್ ಅಭಿಮಾನಿ ಆಗಿಬಿಟ್ಟಿದ್ದರು. 'ಓಂ' ಚಿತ್ರವನ್ನು ನಿರ್ಮಾಣ ಮಾಡುವ ಮುನ್ನ ಉಪೇಂದ್ರ ನಿರ್ದೇಶನದ ಸಿನಿಮಾ ನೋಡಬೇಕು ಎಂದು ಅಣ್ಣಾವ್ರ ಹೇಳಿದಾಗ 'ಶ್' ಸಿನಿಮಾ ತೋರಿಸಲಾಗಿತ್ತು. ಮೂರು ಬಾರಿ ಸಿನಿಮಾ ನೋಡಿ ಅಣ್ಣಾವ್ರ ಮೆಚ್ಚಿಕೊಂಡಿದ್ದರು. ಅದರಲ್ಲೂ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಬ್ಯಾಂಕ್‌ ಜನಾರ್ಧನ್ ಬೈಯ್ಯುವ ಸನ್ನಿವೇಶವನ್ನು ಡಾ. ರಾಜ್ ಬಹಳ ಎಂಜಾಯ್ ಮಾಡಿದ್ದರು. ಈ ವಿಚಾರವನ್ನು ಸಾಕಷ್ಟು ಸಂದರ್ಭಗಳಲ್ಲಿ ಬ್ಯಾಂಕ್ ಜನಾರ್ಧನ್ ಅವರಿಗೆ ಅಣ್ಣಾವ್ರು ಹೇಳಿದ್ದರು.

ಹೆಸರಿನ ಜೊತೆ 'ಬ್ಯಾಂಕ್'

ಜನಾರ್ಧನ್ ಅವರು ಬ್ಯಾಂಕ್ ನೌಕರನಾಗಿದ್ದುಕೊಂಡೇ ಚಿತ್ರಗಳಲ್ಲಿ ನಟಿಸುತ್ತಿದ್ದರು. ಜನಾರ್ಧನ್ ಎಂಬ ಹೆಸರಿನ ಸಾಕಷ್ಟು ಜನ ಆಗ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದರು. ಹಾಗಾಗಿ ವಿಭಿನ್ನವಾಗಿರಲಿ, ಗುರ್ತಿಸಲು ಸುಲಭವಾಗಲಿ ಎನ್ನುವ ಕಾರಣಕ್ಕೆ ಪಿಆರ್‌ಓ ಆಗಿದ್ದ ನಾಗೇಂದ್ರ ಅವರು ಇನ್ನು ಮುಂದೆ ನಿಮ್ಮ ಹೆಸರನ್ನು ಬ್ಯಾಂಕ್ ಜನಾರ್ಧನ್ ಎಂದು ಬದಲಿಸಿಕೊಳ್ಳಿ ಎಂದಿದ್ದರು. ಅವರ ಸಲಹೆಯಂತೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಖಾಯಂ ಆಗಿತ್ತು.

'ಅಜಗಜಾಂತರ'ದಿಂದ ತಿರುವು

ಬ್ಯಾಂಕ್‌ನಲ್ಲಿ ಕೆಲಸ ಮಾಡಿಕೊಂಡೇ ನಾಟಕಗಳಲ್ಲಿ ಜನಾರ್ಧನ್ ನಟಿಸುತ್ತಿದ್ದರು. 'ಗೌಡ್ರ ಗದ್ದಲ' ನಾಟಕದಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದರು. ಬಳಿಕ ನಾಟಕ ಕಂಪನಿಗಳಲ್ಲಿ ಬಣ್ಣ ಹಚ್ಚಲು ಆರಂಭಿಸಿದ್ದರು. ಖ್ಯಾತ ಹಾಸ್ಯನಟ ಧೀರೇಂದ್ರ ಗೋಪಾಲ್ ಸಹಾಯದಿಂದ 'ಊರಿಗೆ ಉಪಕಾರಿ' ಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದರು. 'ಅಜಗಜಾಂತರ' ಚಿತ್ರದ ಪಾತ್ರ ಒಳ್ಳೆ ಹೆಸರು ತಂದುಕೊಟ್ಟಿತ್ತು. ಅಲ್ಲಿಂದ ಮುಂದೆ ಬೇಡಿಕೆ ಹೆಚ್ಚಾಗಿತ್ತು.

More from Filmibeat

English summary
Veteran Kannada Comedian Bank Janardhan who brought laughter despite facing financial struggles
Read more about: bank janardhan sandalwood kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X