Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ನಟ ಚಿಕ್ಕಣ್ಣ ಈಗ ಹೀರೋ: ಅಕ್ಟೋಬರ್ 19ಕ್ಕೆ ಟೈಟಲ್ ಬಿಡುಗಡೆ
ಹಾಸ್ಯ ನಟರು ಹೀರೋ ಆಗುವುದು ಹಳೆಯ ಟ್ರೆಂಡ್. ಅನೇಕ ಹಾಸ್ಯ ನಟರು ಹೀರೋ ಆಗಿ ಸಕ್ಸಸ್ ಕಂಡಿರುವುದು ನೋಡಿದ್ದೇವೆ. ಕನ್ನಡದಲ್ಲಿ ಕೋಮಲ್ ಕುಮಾರ್, ಶರಣ್ ಸಹ ಹಾಸ್ಯನಟನಾಗಿ ವೃತ್ತಿ ಜೀವನ ಆರಂಭಿಸಿದರೂ ಇಂದು ಸ್ಟಾರ್ ಹೀರೋಗಳು ಎನಿಸಿಕೊಂಡಿದ್ದಾರೆ.
ಇದೀಗ, ಈ ಪಟ್ಟಿಗೆ ಹಾಸ್ಯ ನಟ ಚಿಕ್ಕಣ್ಣ ಸೇರಿದ್ದಾರೆ. ಸದ್ಯ ಕನ್ನಡದ ಬಹುಬೇಡಿಕೆಯ ಹಾಗೂ ದುಬಾರಿ ಹಾಸ್ಯ ನಟ ಆಗಿರುವ ಚಿಕ್ಕಣ್ಣ ಹೀರೋ ಆಗಿ ಬಡ್ತಿ ಪಡೆದುಕೊಂಡಿದ್ದಾರೆ.
ದೊಡ್ಡ ತೆರೆಯ ಮೇಲೆ ಚಿಕ್ಕಣ್ಣನ ಹೊಸ ಜರ್ನಿ: ಹೀರೋ ಆದ ಹಾಸ್ಯನಟ
ಅಕ್ಟೋಬರ್ 19 ರಂದು ಚಿತ್ರದ ಶೀರ್ಷಿಕೆ ಏನು ಎಂಬುದನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ. ಸದ್ಯದ ಮಾಹಿತಿ ಪ್ರಕಾರ, ಈ ಚಿತ್ರಕ್ಕೆ ಉಪಾಧ್ಯಕ್ಷ ಎಂದು ಹೆಸರಿಡಲಾಗಿದೆ ಎನ್ನಲಾಗುತ್ತಿದೆ. ಆದರೆ, ಅಧಿಕೃತವಾಗಿ ಘೋಷಣೆಯಾಗಿಲ್ಲ.
'ಬಾಂಬೆ ಮಿಠಾಯಿ', 'ಡಬ್ಬಲ್ ಎಂಜಿನ್' ಎಂಬ ಎರಡು ಸಿನಿಮಾಗಳನ್ನು ನಿರ್ದೇಶಿಸಿರುವ ಚಂದ್ರಮೋಹನ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ಹೆಬ್ಬುಲಿ, ರಾಬರ್ಟ್ ಖ್ಯಾತಿಯ ಉಮಾಪತಿ ಶ್ರೀನಿವಾಸ್ ನಿರ್ಮಿಸುತ್ತಿದ್ದಾರೆ. ಸ್ಮಿತಾ ಉಮಾಪತಿ ಮತ್ತು ನಿರ್ಮಲಾ ಶ್ರೀನಿವಾಸ್ ಹೆಸರಿನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.
Recommended Video
ರವಿಶಂಕರ್, ರಾಕ್ಲೈನ್ ಸುಧಾಕರ್ ಇನ್ನೂ ಹಲವರಿದ್ದಾರೆ. ಹೊಸ ನಾಯಕಿಯನ್ನು ಪರಿಚಯಿಸಲಾಗುತ್ತದೆಯಂತೆ. ಇನ್ನು ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಒಳಗೊಂಡಿದೆ.