Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೊಡ್ಡ ತೆರೆಯ ಮೇಲೆ ಚಿಕ್ಕಣ್ಣನ ಹೊಸ ಜರ್ನಿ: ಹೀರೋ ಆದ ಹಾಸ್ಯನಟ
ಹಾಸ್ಯನಟರು ನಾಯಕ ನಟರಾಗುವುದು ಸಾಮಾನ್ಯ ಎಂಬತಾಗಿಬಿಟ್ಟಿದೆ. ಎಲ್ಲಾ ಸಿನಿಮಾ ಉದ್ಯಮಗಳಲ್ಲಿಯೂ ಅದು ಸಾಮಾನ್ಯ. ಆದರೆ ನಾಯಕನಟರಾದ ಹಾಸ್ಯನಟರು ಯಶಸ್ವಿಯಾದ ಉದಾಹರಣೆ ಹೆಚ್ಚಿಲ್ಲ.
ಕನ್ನಡದಲ್ಲಿಯೂ ಸಹ ಹಲವು ಹಾಸ್ಯ ನಟರು ಹೀರೋಗಳಾಗಿ ಸಿನಿಮಾಗಳನ್ನು ಮಾಡಿದರು. ಆದರೆ ಹಲವರು ಮುಗ್ಗರಿಸಿದರು. ಕೆಲವರು ದೊಡ್ಡ ಯಶಸ್ಸುಗಳಿಸಿದರು. ಕೆಲವರು ಸಾಧಾರಣ ಯಶಸ್ಸಿನೊಂದಿಗೆ ಮುಂದುವರೆಯುತ್ತಿದ್ದಾರೆ.
ಟಗರು ಸರೋಜ ಜೊತೆ ಚಿಕ್ಕಣ್ಣ ಮದುವೆ ಆಗಿರುವುದು ನಿಜವೇ?
ಇದೇ ಸಾಲಿಗೆ ಈಗ ಮತ್ತೊಬ್ಬ ಖ್ಯಾತ ಹಾಸ್ಯನಟ ಸೇರುತ್ತಿದ್ದಾರೆ. ಕಿರುತೆರೆಯಿಂದ ನಟನೆ ಪ್ರಾರಂಭಿಸಿ ಹಿರಿ ತೆರೆಗೆ ಬಂದು, ಪ್ರಸ್ತುತ ಬೇಡಿಕೆಯ ಹಾಸ್ಯನಟ ಎನಿಸಿಕೊಂಡಿರುವ ಚಿಕ್ಕಣ್ಣ, ಹಾಸ್ಯನಟನಿಂದ ಬಡ್ತಿ ಪಡೆದು ಹೀರೋ ಆಗಲು ರೆಡಿಯಾಗಿದ್ದಾರೆ.
ಚಂದ್ರಮೋಹನ್ ನಿರ್ದೇಶನದ ಸಿನಿಮಾ
ಚಿಕ್ಕಣ್ಣ ಸಿನಿಮಾ ಒಂದರಲ್ಲಿ ಹೀರೋ ಆಗುತ್ತಿದ್ದಾರೆ. 'ಬಾಂಬೆ ಮಿಠಾಯಿ', 'ಡಬ್ಬಲ್ ಎಂಜಿನ್' ಎಂಬ ಎರಡು ಸಿನಿಮಾಗಳನ್ನು ನಿರ್ದೇಶಿಸಿರುವ ಚಂದ್ರಮೋಹನ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಚಿಕ್ಕಣ್ಣ ಹೀರೋ.
ಖ್ಯಾತ ಪಾತ್ರದ ಹೆಸರೇ ಸಿನಿಮಾಕ್ಕೆ!
ಚಿಕ್ಕಣ್ಣಗೆ ದೊಡ್ಡ ಖ್ಯಾತಿ ತಂದುಕೊಟ್ಟ ಪಾತ್ರದ ಹೆಸರನ್ನೇ ಅವರು ಹೀರೋ ಆಗಲಿರುವ ಸಿನಿಮಾಕ್ಕೂ ಇಡಲಾಗಿದೆ. 'ಅಧ್ಯಕ್ಷ' ಸಿನಿಮಾದ ಉಪಾಧ್ಯಕ್ಷ ಪಾತ್ರ ಚಿಕ್ಕಣ್ಣನಿಗೆ ದೊಡ್ಡ ಹೆಸರುಗಳಿಸಿಕೊಟ್ಟಿತ್ತು. ಈಗ ಅದೇ ಹೆಸರಿನ ಸಿನಿಮಾ ಮೂಲಕ ಹೀರೋ ಆಗುತ್ತಿದ್ದಾರೆ ಚಿಕ್ಕಣ್ಣ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಜತೆ ಬೌನ್ಸರ್ಗಳ ಕಿರಿಕ್
ಹಳ್ಳಿ ಹೈದನ ಪಾತ್ರದಲ್ಲಿ ಚಿಕ್ಕಣ್ಣ
'ಉಪಾಧ್ಯಕ್ಷ' ಸಿನಿಮಾ ಹಾಸ್ಯಪ್ರಧಾನ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕರು ಹೇಳಿದ್ದು, ಸಿನಿಮಾದಲ್ಲಿ ನಾರಾಯಣ ಎಂಬ ಯುವಕನ ಪಾತ್ರದಲ್ಲಿ ಮಿಂಚಲಿದ್ದಾರಂತೆ ಚಿಕ್ಕಣ್ಣ. ಹಳ್ಳಿ ಪ್ರಧಾನವಾಗಿಟ್ಟುಕೊಂಡು ನಡೆಯುವ ಸಿನಿಮಾದ ಕತೆ ಡಾರ್ಜಲಿಂಗ್, ಮುನ್ನಾರ್ಗಳಿಗೂ ಸಾಗುತ್ತದೆಯಂತೆ. ಅಲ್ಲಿಯೂ ಚಿತ್ರೀಕರಣ ಮಾಡುತ್ತೇವೆ ಎಂದಿದ್ದಾರೆ ನಿರ್ದೇಶಕರು.
Recommended Video
ಹೀರೋ ಆಗಲೆಂದು ಸಿನಿಮಾ ಮಾಡುತ್ತಿಲ್ಲ: ಚಿಕ್ಕಣ್ಣ
'ಹೀರೋ ಆಗಲೆಂದು ಸಿನಿಮಾ ಮಾಡುತ್ತಿಲ್ಲ, ಸಿನಿಮಾದ ಕತೆ ಚೆನ್ನಾಗಿದೆ ಎಂಬ ಕಾರಣಕ್ಕೆ ಒಪ್ಪಿಕೊಂಡಿದ್ದೇನೆ' ಎಂದಿದ್ದಾರೆ ಚಿಕ್ಕಣ್ಣ. ಸಿನಿಮಾದಲ್ಲಿ ಸಾಧುಕೋಕಿಲಾ, ರವಿಶಂಕರ್, ರಾಕ್ಲೈನ್ ಸುಧಾಕರ್ ಇನ್ನೂ ಹಲವರಿದ್ದಾರೆ. ಹೊಸ ನಾಯಕಿಯನ್ನು ಪರಿಚಯಿಸಲಾಗುತ್ತದೆಯಂತೆ.