Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ನಟ ಎಂಎಸ್ ಉಮೇಶ್ ಜೊತೆ ಮಾತುಕತೆ
ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ. ಕಥಾಸಂಗಮದ 'ಮುನಿತಾಯಿ'ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯೂ ದೊರಕಿತು.
ಐದು ದಶಕಗಳಿಗೂ ಹೆಚ್ಚು ಕಾಲದಿಂದ ಕಲಾವಿದರಾಗಿ ಸಕ್ರಿಯರಾಗಿರುವ ಉಮೇಶ್ ಉತ್ತಮ ಬರಹಗಾರರು. ಈ ಹಿರಿಯ ಚೇತನದೊಂದಿಗೆ ಈ ತಿಂಗಳ ಬೆಳ್ಳಿ ಹೆಜ್ಜೆ ಕಾರ್ಯಕ್ರಮ. ಕರ್ನಾಟಕ ಚಲನಚಿತ್ರ ಅಕಾಡೆಮಿ ನಡೆಸಿಕೊಡುತ್ತಿರುವ ವಿಭಿನ್ನ ಕಾರ್ಯಕ್ರಮ.
ಇದೇ ಶನಿವಾರ, 28ನೇ ಜುಲೈ 2012, ಸಂಜೆ 5 ಗಂಟೆಗೆ, ಪ್ರಿಯದರ್ಶಿನಿ ಚಿತ್ರಮಂದಿರ, ಬಾದಾಮಿ ಹೌಸ್, ಬೆಂಗಳೂರು-2 ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಎಂ ಎಸ್ ಉಮೇಶ್ ಕುರಿತಾದ ಕಿರುಚಿತ್ರ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ.
ಅಂದಹಾಗೆ 'ಗೋಲ್ ಮಾಲ್ ರಾಧಾಕೃಷ್ಣ' ಚಿತ್ರದಲ್ಲಿನ ಅವರ ಡೈಲಾಗ್ ಇಂದಿಗೂ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. "ಅಯ್ಯೂ ನನ್ನ ಹೆಂಡ್ತಿ ಅಂದುಕೊಂಡು ನಿಮ್ಮ ಹೆಂಡ್ತೀನಾ ತಬ್ಬುಕೊಂಡು ಬಿಟ್ಟೆನಲ್ಲಾ. ಅಯ್ಯೂ ಇವರು ನನ್ನ ಅಪಾರ್ಥ ಮಾಡಿಕೊಂಡು ಬಿಟ್ರಲ್ಲ..." ಎಂಬ ಡೈಲಾಗ್ ಉಮೇಶ್ ಅವರನ್ನು ನೋಡಿದರೆ ನೆನಪಾಗುತ್ತದೆ.
ವರನಟ ಡಾ.ರಾಜ್ ಕುಮಾರ್ ಜೊತೆ 'ಶೃತಿ ಸೇರಿದಾಗ' ಚಿತ್ರದಲ್ಲಿನ "ಇದು ಬೊಂಬೆಯಾಟವಯ್ಯಾ..." ಹಾಡಿನಲ್ಲಿ ಅಮೋಘ ಅಭಿನಯವಂತೂ ಪ್ರೇಕ್ಷಕರನ್ನು ರಂಜಿಸಿತ್ತು. ಹಾಲು ಜೇನು, ಶ್ರಾವಣ ಬಂತು, ಗುರುಶಿಷ್ಯರು, ಮಲಯಮಾರುತ, ನೀನು ನಕ್ಕರೆ ಹಾಲು ಸಕ್ಕರೆ, ಚೈತ್ರದ ಪ್ರೇಮಾಂಜಲಿ ಚಿತ್ರಗಳು ಉಮೇಶ್ ಅಭಿನಯದ ಕೆಲವು ಚಿತ್ರಗಳು.
ಎಲ್ಲರಂತಲ್ಲ ನನ್ನ ಗಂಡ, ಜೇನುಗೂಡು, ಚನ್ನ ಚಿತ್ರಗಳು ಉಮೇಶ್ ನಿರ್ದೇಶನದ ಚಿತ್ರಗಳು. ಇಂತಹ ಹಿರಿಯ ಚೇತನ ತಮ್ಮ ಬೆಳ್ಳಿಹೆಜ್ಜೆ ಜಾಡುಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. (ಒನ್ ಇಂಡಿಯಾ ಕನ್ನಡ)