Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಖಿಲ್ ಕುಮಾರ್ ಸಿನಿಮಾದಲ್ಲಿ 'ಕಾಮಿಡಿ ಕಿಲಾಡಿ' ನಯನ
'ಕುರುಕ್ಷೇತ್ರ' ನಂತರ ನಿಖಿಲ್ ಕುಮಾರ್ 'ಸೀತಾರಾಮ ಕಲ್ಯಾಣ' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಿಖಿಲ್ ಜೊತೆಗೆ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಸದ್ಯ ನಡೆಯುತ್ತಿದೆ.
ವಿಶೇಷ ಅಂದರೆ ಈ ಸಿನಿಮಾದ ಒಂದು ಪಾತ್ರದಲ್ಲಿ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಯನ ಕಾಣಿಸಿಕೊಳ್ಳಲಿದ್ದಾರೆ. 'ಕಾಮಿಡಿ ಕಿಲಾಡಿಗಳು' ಮೂಲಕ ಫೇಮಸ್ ಆದ ನಯನ ಈಗಾಗಲೇ ಕೆಲ ಸಿನಿಮಾ ಮಾಡಿದ್ದಾರೆ. ಅದರ ಜೊತೆಗೆ ಈಗ ಈ ಚಿತ್ರದಲ್ಲಿಯೂ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ. ಈ ಸಿನಿಮಾದ ಜೊತೆಗೆ ನಯನ ಮತ್ತೊಂದು ಹೊಸ ಸಿನಿಮಾ ಮಾಡುತ್ತಿದ್ದಾರೆ. ಕುರಿ ಪ್ರತಾಪ್ ಮತ್ತು ನಯನ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಸಿನಿಮಾಗೆ 'ಮಿಸ್ಟರ್ ಜೈ' ಎನ್ನುವ ಹೆಸರು ಇಡಲಾಗಿದೆ.
ನಿಖಿಲ್ ಕುಮಾರ್ ಮತ್ತು ರಚಿತಾ ರಾಮ್ ಇಬ್ಬರು ಈಗ ರಾಮ - ಸೀತಾ!
'ಸೀತಾರಾಮ ಕಲ್ಯಾಣ' ಸಿನಿಮಾವನ್ನು ಹರ್ಷ ನಿರ್ದೇಶನ ಮಾಡುತ್ತಿದ್ದಾರೆ. 'ಅಂಜನೀಪುತ್ರ' ಚಿತ್ರದ ನಂತರ ಹರ್ಷ ಡೈರೆಕ್ಟ್ ಮಾಡುತ್ತಿರುವ ಸಿನಿಮಾ ಇದಾಗಿದೆ. ಇಷ್ಟು ದಿನ ತಮ್ಮ ಸಿನಿಮಾಗಳಲ್ಲಿ ಆಂಜನೇಯನ ಆರಾಧನೆ ಮಾಡುತ್ತಿದ್ದ ಹರ್ಷ ಈಗ ಶ್ರೀ ರಾಮನ ನಾಮ ಹಾಡುತ್ತಿದ್ದಾರೆ. ಈ ಸಿನಿಮಾವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಮಾಣ ಮಾಡುತ್ತಿದ್ದಾರೆ. 'ಸೀತಾರಾಮ ಕಲ್ಯಾಣ' ಹಳ್ಳಿಯಲ್ಲಿ ನಡೆಯುವ ಕಥೆ ಆಗಿದೆ. ಈ ಹಿಂದೆ ಬಂದ 'ಚಂದ್ರಚಕೋರಿ' ಚಿತ್ರದ ಮಾದರಿಯಲ್ಲಿ ಈ ಸಿನಿಮಾ ಇರಲಿದೆ.