Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಮಿಡಿ ಕಿಲಾಡಿ' ನಯನಗೆ ಹುಡುಕಿಕೊಂಡು ಬಂದ ಅದೃಷ್ಟ.!
'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಪ್ರತಿಭೆ ನಯನ. ಈಗಾಗಲೇ ಕನ್ನಡದ ದೊಡ್ಡ ನಟನ ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿರುವ ನಯನಗೆ ಈಗ ಮತ್ತೊಂದು ಅದೃಷ್ಟದ ಆಫರ್ ಬಂದಿದೆ.
ರಾಯಲ್ ಸ್ಟಾರ್ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ 'ಅನಂತು ವರ್ಸಸ್ ನುಸ್ರತ್' ಚಿತ್ರದಲ್ಲಿ ಅವಕಾಶ ಸಿಕ್ಕಿದ್ದು, ಈಗಾಗಲೇ ನಯನ ಶೂಟಿಂಗ್ ಗೆ ಹಾಜರಾಗಿದ್ದಾರೆ.
ಇನ್ನು ನಯನ ಜೊತೆ ಕನ್ನಡದ ಖ್ಯಾತ ಖಳನಟ ಕೂಡ ವಿನಯ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಮುಂದೆ ಓದಿ......
ವಿನಯ್ ಜೊತೆ ಶಾಂತಲಕ್ಷ್ಮಿ
ವಿನಯ್ ರಾಜ್ ಕುಮಾರ್ ಅವರ 'ಅನಂತು ವರ್ಸಸ್ ನುಸ್ರತ್' ಚಿತ್ರದಲ್ಲಿ ನಯನ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದು, ಶಾಂತಲಕ್ಷ್ಮಿ ಎಂಬ ಲಾಯರ್ ಪಾತ್ರವನ್ನ ನಿರ್ವಹಿಸುತ್ತಿದ್ದಾರೆ.
ರಾಜ್ ಮೊಮ್ಮಗನ ಚಿತ್ರಕ್ಕೆ ಶುಭ ಕೋರಿದ ರಾಜ್ ಪುತ್ರರು
ನಯನಗೆ ಅದೃಷ್ಟ ಖುಲಾಯಿಸಿದೆ
ಈ ಚಿತ್ರ ಮಾತ್ರವಲ್ಲದೇ, ಯಶ್ ಅಭಿನಯದ 'ಕೆ.ಜಿ.ಎಫ್' ಚಿತ್ರದಲ್ಲಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇ ಗೌಡ ನಿರ್ದೇಶನದ 'ಜಂತರ್ ಮಂಥರ್' ಚಿತ್ರದಲ್ಲೂ ನಯನ ಕಮಾಲ್ ಮಾಡಲಿದ್ದಾರೆ.
ವಿನಯ್ ರಾಜ್ ಕುಮಾರ್ ಗೆ ಜೋಡಿಯಾದ ನ್ಯೂಜಿಲ್ಯಾಂಡ್ ಚೆಲುವೆ ಯಾರದು?
ರವಿಶಂಕರ್ ಎಂಟ್ರಿ
ಕನ್ನಡದ ಖ್ಯಾತ ಖಳನಟ ರವಿಶಂಕರ್ ಕೂಡ ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದು, ವಿಭಿನ್ನ ಪಾತ್ರವನ್ನ ನಿರ್ವಹಿಸಲಿದ್ದಾರೆ.
ಅನಂತು ವರ್ಸಸ್ ನುಸ್ರತ್ ಚಿತ್ರದ ಬಗ್ಗೆ...
ಅಂದ್ಹಾಗೆ, ವಿನಯ್ ರಾಜ್ ಕುಮಾರ್ ಇದೇ ಮೊದಲ ಬಾರಿಗೆ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಾಯಕಿಯಾಗಿ ಲತಾ ಹೆಗಡೆ ಜೋಡಿಯಾಗಿದ್ದಾರೆ. ಈ ಚಿತ್ರವನ್ನ ಸುಧೀರ್ ಶಾನುಭೋಗ್ ನಿರ್ದೇಶಿಸುತ್ತಿದ್ದಾರೆ. ಮಾಣಿಕ್ಯ ಪ್ರೊಡಕ್ಷನ್ಸ್ನಡಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಸುನಾದ್ ಗೌತಮ್ ಅವರ ಸಂಗೀತ ಚಿತ್ರಕ್ಕಿದೆ.