Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ದಿನ ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ ವಿಜಯ್ ವಿರುದ್ಧ ಕೇಸ್ ದಾಖಲು
Recommended Video
ತಲ್ವಾರ್ ನಲ್ಲಿ ಕೇಕ್ ಕತ್ತರಿ ವಿವಾದ ಮೈಮೇಲೆ ಎಳೆದುಕೊಂಡಿರುವ ನಟ ದುನಿಯಾ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಗಿರಿನಗರ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. ಈಗಾಗಲೆ ವಿಜಿ ಕೇಕ್ ಕತ್ತರಿಸಿರುವ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋ ನೋಡಿ ಡಿಸಿಪಿ ರೋಹಿಣಿ ಸೆಪಟ್ ತನಿಖೆ ನಡೆಸುವಂತೆ ಗಿರಿನಗರ ಪೊಲೀಸರಿಗೆ ಸೂಚನೆ ನೀಡಿದ್ದರು.
ಆದರೀಗ ವಿಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಎಫ್ ಐ ಆರ್ ದಾಖಲು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕವಾಗಿ ಯಾವುದೆ ಆಯುಧಗಳನ್ನು ಬಳಸುವಂತಿಲ್ಲ ಮತ್ತು ಪ್ರದರ್ಶಿಸುವಂತಿಲ್ಲ. ಇದು ಆರ್ಮ್ಸ್ ಆಕ್ಟ್ ಅಡಿ ಅಪರಾಧವಾಗುತ್ತೆ.
ಹುಟ್ಟುಹಬ್ಬದಂದು ದುನಿಯಾ ವಿಜಿ ಮತ್ತೊಂದು ವಿವಾದ: ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ ನಟ
ಈ ಬಗ್ಗೆ ವಿಜಿ ಕೂಡ ಪ್ರತಿಕ್ರಿಯಿಸಿದ್ದು, "ನನ್ನ ಗಮನಕ್ಕೆ ಬಾರದೆ ಎಡವಟ್ಟಾಗಿದೆ, ಕ್ಷಮೆ ಇರಲಿ" ಎಂದಿದ್ದರು. ವಿಜಿ ಕೇಟ್ ಕತ್ತರಿಸುವ ಸಮಯದಲ್ಲಿ ವಿಜಯ್ ಜೊತೆ ತಾಯಿ, ಪತ್ನಿ ಕೀರ್ತಿ ಮತ್ತು ಸಲಗ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್ ಸಹ ಇದ್ದರು.
ಇನ್ನು ವಿಜಿ ಹುಟ್ಟುಹಬ್ಬ ಆಚರಣೆ ವೇಳೆ ಸಾಕಷ್ಟು ಅಭಿಮಾನಿಗಳು ಭಾಗಿಯಾಗಿದ್ದರು. ಇದರಿಂದ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಆಗಿದ್ದು, ರಾತ್ರಿಯಲ್ಲ ಕಿರಿಕಿರಿ ಅನುಭವಿಸಿದ್ದೇವೆ ಎಂದು ಫೇಸ್ ಬುಕ್ ನಲ್ಲಿ ದೂರು ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹುಟ್ಟುಹಬ್ಬದ ದಿನ ಸಂಭ್ರಮಿಸಬೇಕಿದ್ದ ವಿಜಿ ಈಗ ತೊಂದರೆಯಲ್ಲಿ ಸಿಲುಕಿದ್ದಾರೆ.
ವಿಜಯ್ 46ನೇ ವರ್ಷದ ಹುಟ್ಟಹುಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆ ಬಳಿ ಇರುವ ತಮ್ಮ ನಿವಾಸದಲ್ಲಿ ಆಚರಣೆ ಮಾಡಿಕೊಳ್ಳುತ್ತಿದ್ದು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು ವಿಜಿಗೆ ಶುಭಾಶಯ ತಿಳಿಸುತ್ತಿದ್ದಾರೆ.