Don't Miss!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತ ಪ್ರಕರಣಕ್ಕೆ ತಿರುವು: ದರ್ಶನ್ ಜೊತೆಗಿದ್ದ ರಾಯ್ ಅಂಟೋನಿಗೆ ಈಗ ಕಂಟಕ
ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತವಾದ ಘಟನೆ ದಿನದಿಂದ ದಿನಕ್ಕೆ ತಿರುವುಗಳನ್ನ ಪಡೆದುಕೊಳ್ಳುತ್ತಿದೆ.
ಸದ್ಯದ ಮಾಹಿತಿವರೆಗೂ ದರ್ಶನ್ ಕಾರು ಅಪಘಾತ ನಡೆದ ಸಂದರ್ಭದಲ್ಲಿ ರಾಯ್ ಆಂಟೋನಿ ಎಂಬುವರು ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಇದುವರೆಗೂ ಯಾರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರಲಿಲ್ಲ. ಸ್ವತಃ ಪೊಲೀಸರೇ ಸ್ವಯಂ ದೂರು ದಾಖಲಿಸಿಕೊಂಡು ಸಾಮಾನ್ಯ ಅಪಘಾತವೆಂದು ಪ್ರಕರಣ ದಾಖಲಿಸಿದ್ದರು.
ದರ್ಶನ್ ಬಹುದಿನದ ಆಸೆಯನ್ನ ನುಚ್ಚುನೂರು ಮಾಡಿತು ಈ ಅಪಘಾತ
ಇದೀಗ, ದರ್ಶನ್ ಆಪ್ತ ಹಾಗೂ ಸ್ನೇಹಿತ ಎಂದು ಹೇಳಲಾಗುತ್ತಿರುವ ರಾಯ್ ಆಂಟೋನಿ ವಿರುದ್ಧ ಕಂಪ್ಲೆಂಟ್ ರಿಜಿಸ್ಟರ್ ಆಗಿದೆ ಎನ್ನಲಾಗಿದೆ. ಈ ಅಪಘಾತಕ್ಕೆ ರಾಯ್ ಆಂಟೋನಿ ಕಾರಣ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರಿಗೆ ದೂರು ನೀಡಲಾಗಿದೆಯಂತೆ. ಅಷ್ಟಕ್ಕೂ, ದೂರು ನೀಡಿದ್ದು ಯಾರು.? ಮುಂದೆ ಓದಿ.....
ದರ್ಶನ್ ಗನ್ ಮ್ಯಾನ್ ನಿಂದ ದೂರು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಖಾಸಗಿ ಗನ್ ಮ್ಯಾನ್ ಲಕ್ಷ್ಮಣ್ ಅವರಿಂದ ರಾಯ್ ಆಂಟೋನಿ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಈ ಅಪಘಾತಕ್ಕೆ ರಾಯ್ ಆಂಟೋನಿ ಕಾರಣ, ಅವರ ವಿರುದ್ಧ ಕ್ರಮ ಜರುಗಿಸಿ ಎಂದು ದೂರಿನಲ್ಲಿ ಹೇಳಲಾಗಿದೆ.
ಬಚ್ಚಿಟ್ಟಿದ್ದ ದಾಸನ ಅಪಘಾತದ ಕಾರು, ಶ್ರೀರಂಗಪಟ್ಟಣದಲ್ಲಿ ಪತ್ತೆ
ಚಾಲಕನ ನಿರ್ಲಕ್ಷ್ಯ ಕಾರಣ
ನಸುಕಿನ ಜಾವ 2.30ಕ್ಕೆ ಆಡಿ ಕಾರು ಡ್ರೈವ್ ಮಾಡ್ತಿದ್ದ ಆಂಟೋನಿ ರಾಯ್ ಅವರ ನಿರ್ಲಕ್ಷ್ಯತನ ದಿಂದ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಆಕ್ಸಿಡೆಂಟ್ ಆಗಿದೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಆರೋಪಿಸಿದ್ದಾರೆ.
ಅಪಘಾತಕ್ಕೂ ಮುಂಚೆ ದರ್ಶನ್-ದೇವರಾಜ್ ಪಾರ್ಟಿ ಫೋಟೋಗಳು
ರಾಯ್ ಆಂಟೋನಿ ಎಲ್ಲಿದ್ದಾರೆ.?
ಕಾರು ಅಪಘಾತದಲ್ಲಿ ರಾಯ್ ಆಂಟೋನಿ ಅವರಿಗೂ ಗಾಯಗಳಾಗಿವೆ. ಅವರು ಕೂಡ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಇದುವರೆಗೂ ಅವರ ಆರೋಗ್ಯದ ಬಗ್ಗೆ ಮಾಹಿತಿ ಇಲ್ಲ. ಕಾರಿನಲ್ಲಿ ಒಟ್ಟು ನಾಲ್ಕು ಜನ ಇದ್ದರು. ದರ್ಶನ್ ಕಾರಿನ ಮುಂದೆ ಸೀಟಿನಲ್ಲಿ, ಹಾಗೂ ಹಿಂಬದಿ ಸೀಟಿನಲ್ಲಿ ದೇವರಾಜ್ ಮತ್ತು ಪ್ರಜ್ವಲ್ ಇದ್ದರು ಎನ್ನಲಾಗಿದೆ. ಹಿನಕಲ್ ಬಳಿ ರಿಂಗ್ ರಸ್ತೆ ಜಂಕ್ಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತವಾಗಿದೆಯಂತೆ.
ಅಪಘಾತದ ವೇಳೆ ದರ್ಶನ್ ಕಾರು ಚಲಾಯಿಸುತ್ತಿದ್ದ ರಾಯ್ ಅಂಟೋನಿ ಯಾರು.?
ಯಾರು ಈ ರಾಯ್ ಆಂಟೋನಿ.?
ರಾಯ್ ಆಂಟೋನಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಎಂದು ಹೇಳಲಾಗಿದೆ. ದರ್ಶನ್ ಅವರ ಸ್ನೇಹಿತರಾಗಿದ್ದರು. ಮತ್ತು ದರ್ಶನ್ ಅವರ ಕಾರನ್ನ ಇವರೇ ಚಾಲನೆ ಮಾಡ್ತಿದ್ದರು ಎಂದು ಹೇಳಲಾಗ್ತಿದೆ. ತುಂಬಾ ವರ್ಷದಿಂದ ದರ್ಶನ್ ಅವರ ಆಪ್ತ ವಲಯದಲ್ಲಿ ರಾಯ್ ಆಂಟೋನಿ ಗುರುತಿಸಿಕೊಂಡಿದ್ದಾರೆ.