Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣಾ ಪ್ರಚಾರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ದೂರು ದಾಖಲು
ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ. ಮುನಿರತ್ನ ಪರವಾಗಿ ನಟ ದರ್ಶನ್ ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೂ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಪ್ರಚಾರ ಸಮಯದಲ್ಲಿ ಕೋವಿಡ್-19 ಮಾರ್ಗಸೂಚಿಯನ್ನು ಪಾಲಿಸಿಲ್ಲ ಎನ್ನುವ ಆರೋಪ ದರ್ಶನ್ ವಿರುದ್ಧ ಕೇಳಿಬಂದಿದೆ. ಕೊರೊನಾ ಮಾರ್ಗಸೂಚಿ ಪಾಲಿಸದೆ ಪ್ರಚಾರ ಮಾಡಿದ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡೆ ದೂರು ದಾಖಲಿಸಲಾಗಿದೆ.
ಹೆಸರು ಗಳಿಸಿದರೆ ನಿಮ್ಮಂತೆ ಗಳಿಸಬೇಕು; ದರ್ಶನ್ ಬಗ್ಗೆ ನಟಿ ಅಮೂಲ್ಯ ಹೀಗೆ ಹೇಳಿದ್ದೇಕೆ?
ಆರ್ ಆರ್ ನಗರ ಉಪಚುನಾವಣೆ ಕಣ ಭಾರಿ ಕುತೂಹಲ ಕೆರಳಿಸಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಬಿಜೆಪಿ ಮುನಿರತ್ನ ಪರ ನಟ ದರ್ಶನ್ ಸೇರಿದಂತೆ ಅನೇಕ ಕಲಾವಿದರು ಚುನಾವಣಾ ಪ್ರಚಾರ ಮಾಡಿದ್ದಾರೆ.
ದರ್ಶನ್ ಪ್ರಚಾರದ ದಿನ ಅಭಿಮಾನಿಗಳ ದಂಡೆ ನೆರೆದಿತ್ತು. ಡಿ ಬಾಸ್ ಪ್ರಚಾರಕ್ಕೆ ಬರ್ತಿದ್ದಾರೆ ಎನ್ನುವ ಸುದ್ದಿ ಗೊತ್ತಾಗುತ್ತಿದಂತೆ ಅಭಿಮಾನಿಗಳು ಬೆಳಗ್ಗೆಯೇ ಆರ್ ಆರ್ ನಗರ ಕ್ಷೇತ್ರಕ್ಕೆ ಬಂದು ಜಮಾಯಿಸಿದ್ದರು. ದರ್ಶನ್ ಪ್ರಚಾರದ ಜೊತೆಯೇ ಅಭಿಮಾನಿಗಳು ಸಹ ಸಾಲುಗಟ್ಟಿ ಪ್ರಚಾರದಲ್ಲಿ ಭಾಗಿಯಾಗಿದ್ದು ವಿಶೇಷ.
ದರ್ಶನ್ ಜೊತೆ ನಟಿ ಅಮೂಲ್ಯ ಸಹ ಪ್ರಚಾರದಲ್ಲಿ ಭಾಗಿಯಾಗಿದ್ದರು. ದರ್ಶನ್ ಅಭಿಮಾನಿ ಬಳಗ ನೋಡಿ ಮೂಕವಿಸ್ಮಿತರಾದ ಅಮೂಲ್ಯ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಬಗ್ಗೆ ಬರೆದುಕೊಂಡಿದ್ದರು. 'ಹೆಸರು ಗಳಿಸಿದರೆ ನಿಮ್ಮಂತೆ ಹೆಸರು ಗಳಿಸಬೇಕು ಅನಿಸಿತು. ಇಂದು ನಿಮ್ಮೊಂದಿಗೆ ಕ್ಯಾಂಪೇನ್(ಪ್ರಚಾರ) ಮಾಡಿ. ನಿಮ್ಮ ಅಭಿಮಾನಿ ಬಳಗವನ್ನು ನೋಡಿ ನಾನು ಮೂಕವಿಸ್ಮಿತನಾಗಿದ್ದೇನೆ. ನಿಮ್ಮ ಪ್ರೀತಿ ಮತ್ತು ಪ್ರೋತ್ಸಾಹ ನನ್ನ ಮೇಲೆ ಸದಾ ಇರಲಿ' ಎಂದು ಹೇಳಿದ್ದಾರೆ.