Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೆಲ್ಲಾ ಮೇಘನಾ ರಾಜ್ ಹೆಸರಿಗೆ ಮಸಿ ಬಳಿಯುವ ಕೆಲಸ?
ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್ ಮತ್ತು ಮಾಲಿವುಡ್ ನಲ್ಲಿ ಬೇಡಿಕೆ ಕಂಡುಕೊಂಡಿರುವ ನಟಿ ಮೇಘನಾ ರಾಜ್ ಈಗ ವಿವಾದಕ್ಕೆ ಸಿಲುಕಿರುವ ಸಂಗತಿ ನಿಮಗೆ ಗೊತ್ತೇ ಇದೆ.
''ಮೇಘನಾ ರಾಜ್ ನನ್ನ ಮದುವೆ ಆಗಿ ವಂಚಿಸಿದ್ದಾರೆ'' ಎಂದು ತಮಿಳುನಾಡಿನ ಧರ್ಮಪುರಿ ಮೂಲದ ಜನಾರ್ಧನ್ ಎಂಬ ವ್ಯಕ್ತಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಈ-ಮೇಲ್ ಮೂಲಕ ದೂರು ನೀಡಿದ್ದಾರೆ. [ನಟಿ ಮೇಘನಾ ರಾಜ್ ಬಗ್ಗೆ ಕೇಳಿಬಂದಿರುವ ವಂಚನೆ ಆರೋಪ ನಿಜವೇ?]
ಅಸಲಿಗೆ, ಕನ್ನಡ ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಷಾಯಿ ದಂಪತಿಯ ಪುತ್ರಿ ಮೇಘನಾ ರಾಜ್ ಕದ್ದು ಮುಚ್ಚಿ ಮದುವೆ ಆಗುವ ಅವಶ್ಯಕತೆ ಇತ್ತಾ?
ಮಗಳ ಈ ಮದುವೆ ವಿವಾದದ ಬಗ್ಗೆ ನಟಿ ಪ್ರಮೀಳಾ ಜೋಷಾಯಿ ಏನು ಹೇಳ್ತಾರೆ ಅಂತ ತಿಳಿಯಲು ಕೆಳಗಿರುವ ಸ್ಲೈಡ್ ಗಳನ್ನು ಕ್ಲಿಕ್ ಮಾಡಿ....
ನಟಿ ಮೇಘನಾ ರಾಜ್ ಬೆಂಗಳೂರಿನಲ್ಲಿಲ್ಲ!
ಮೇಘನಾ ರಾಜ್ ಕುಟುಂಬದ ಮೂಲಗಳು ತಿಳಿಸಿರುವ ಪ್ರಕಾರ, ಸದ್ಯ ನಟಿ ಮೇಘನಾ ರಾಜ್ ಬೆಂಗಳೂರಿನಲ್ಲಿಲ್ಲ. [ಚಿರು ಸರ್ಜಾ-ಮೇಘನಾ ನಡುವೆ ಏನಿದೆ! ಏನಿಲ್ಲ?]
ಪ್ರತಿಕ್ರಿಯೆ ನೀಡದ ಮೇಘನಾ ರಾಜ್
ತಮ್ಮ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದರೂ, ನಟಿ ಮೇಘನಾ ರಾಜ್ ಪ್ರತಿಕ್ರಿಯೆ ನೀಡಲು ತಯಾರಿಲ್ಲ. ಅವರು ಫೋನ್ ಕಾಲ್ ಗಳನ್ನೂ ರಿಸೀವ್ ಮಾಡುತ್ತಿಲ್ಲ. [ಕನ್ನಡದಲ್ಲಿ ಸಿಕ್ಕಾಪಟ್ಟೆ ಬಿಜಿಯಾದ ಕನ್ನಡತಿ ಮೇಘನಾ ರಾಜ್]
ಮೇಘನಾ ರಾಜ್ ತಾಯಿ ಏನಂತಾರೆ?
ಮೇಘನಾ ರಾಜ್ ತಾಯಿ ಪ್ರಮೀಳಾ ಜೋಷಾಯಿ ಹೇಳಿದಿಷ್ಟು - ''ದೂರಿನ ಬಗ್ಗೆ ಚಾನೆಲ್ ಗಳಲ್ಲಿ ಸುದ್ದಿ ಬಂದಾಗಲೇ ಗೊತ್ತಾಗಿದ್ದು. ಈ ಸುದ್ದಿ ಕೇಳಿ ಆಶ್ಚರ್ಯ ಆಯ್ತು'' [ನಟ ಚಿರಂಜೀವಿ ಸರ್ಜಾಗೆ ನಿದಿರೆ ಬರದಿರೆ ಏನಂತೀ?]
ಯಾರು ಅನ್ನೋದೇ ಗೊತ್ತಿಲ್ಲ!
''ದೂರು ನೀಡಿರುವವರು ಯಾರು ಅಂತಲೇ ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಆಗಬೇಕು'' - ಪ್ರಮೀಳಾ ಜೋಷಾಯಿ [ಬೆಂಗಳೂರು 'ಸಂಪಿಗೆ' ಮೇಘನಾ, ಇದು ನಿಜನಾ?]
ಮಗಳ ಹೆಸರಿಗೆ ಮಸಿ ಬಳಿಯುವ ಪ್ರಯತ್ನ
''ಮಗಳಿಗೆ ಆಗದೇ ಇರೋರು ಯಾರೋ ಹೀಗೆ ಮಾಡಿರಬೇಕು. ಸುಮ್ಮನೆ ಅವಳ ಹೆಸರಿಗೆ ಮಸಿ ಬಳಿಯುತ್ತಿದ್ದಾರೆ'' - ಪ್ರಮೀಳಾ ಜೋಷಾಯಿ
ತಂದೆ ಸುಂದರ್ ರಾಜ್ ಏನಂತಾರೆ?
''ಪ್ರಕರಣದ ಬಗ್ಗೆ ಪೊಲೀಸರು ಮತ್ತು ವಕೀಲರ ಜೊತೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ'' ಅಂತ ತಂದೆ ಸುಂದರ್ ರಾಜ್ ಹೇಳುತ್ತಾರೆ.