Don't Miss!
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ ಮತ್ತು ದುನಿಯಾ ವಿಜಿ ವಿರುದ್ಧ ಕೇಸ್ ದಾಖಲು
ದ್ವಿತೀಯ ಪಿಯುಸಿ ರಸಾಯನ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಟಾಂಗ್ ಕೊಡುವ ರೀತಿಯಲ್ಲಿ ರಚಿಸಲಾದ ಹಾಡಿನ ವಿರುದ್ಧ ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಟ ದುನಿಯಾ ವಿಜಯ್ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಸೋಮವಾರ (ಏಪ್ರಿಲ್ 4) ದೂರು ನೀಡಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ನಿರ್ದೇಶಕ ಯೋಗರಾಜ್ ಭಟ್ ಅವರು ಹಾಡನ್ನು ರಚನೆ ಮಾಡಿದ್ದು, ನಟ ದುನಿಯಾ ವಿಜಯ್ ಅವರು ಹಾಡಿದ್ದರು. ಹಾಡಿನಲ್ಲಿ ಯೋಗರಾಜ್ ಭಟ್ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರ ಹೆಸರನ್ನು ಪರೋಕ್ಷವಾಗಿ ಬಳಸಿಕೊಂಡು ಅವರ ಕುರಿತು ಅವಹೇಳನಕಾರಿಯಾಗಿ ನಿಂದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.[ತಾನು ಸತ್ತರೂ ಅಭಿಮಾನಿಗಳನ್ನು ಬಿಡಲಾರೆ ಎಂದ ದುನಿಯಾ ವಿಜಿ]
ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಹಾಡನ್ನು ರಚಿಸಲಾಗಿದ್ದು, ಸಚಿವ ಕಿಮ್ಮನೆ ರತ್ನಾಕರ ಅವರ ಕುರಿತು ಅವಹೇಳನ ಮಾಡಿರುವ ಉಲ್ಲೇಖ ಹಾಡಿನಲ್ಲಿದೆ. ಹೀಗಾಗಿ ಯೋಗರಾಜ ಭಟ್, ದುನಿಯಾ ವಿಜಯ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಧರಣೇಶ್, ಹರ್ಷೇಂದ್ರ ಕುಮಾರ್, ನಾಗೇಶ್ ಹಾಗೂ ಮಂಜುನಾಥ ಶೆಟ್ಟಿ ಎಂಬುವವರು ದೂರು ಸಲ್ಲಿಸಿದ್ದಾರೆ.[ಯೋಗರಾಜ್ ಭಟ್ರಿಗೆ ಮತ್ತೆ ಲವ್ ಆಯ್ತಂತೆ..!]
ಟಿವಿ ಚಾನೆಲ್ ಒಂದರಲ್ಲಿ ಪ್ರಸಾರವಾದ ಹಾಡಿನಲ್ಲಿ ಅವಹೇಳನಕಾರಿ ಅಂಶವಿದೆ ಎಂಬ ಹಿನ್ನೆಲೆಯಲ್ಲಿ ನೀಡಿದ ದೂರಿನ ಮೇಲೆ ಮೊಕದ್ದಮೆ ದಾಖಲು ಮಾಡಿಲ್ಲ. ಮೇಲಧಿಕಾರಿಗಳ ಸೂಚನೆಯ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಿ ಎಸ್ಐ ಭರತ್ ಕುಮಾರ್ ತಿಳಿಸಿದ್ದಾರೆ.
ನಿರ್ದೇಶಕ ಯೋಗರಾಜ್ ಭಟ್ಟರು 'ಪಿಸಿಎಂಬಿ ತೀಟೆ ಹಾಡು ಕೇಳ್ರಪ್ಪಾ' ಎಂದು ತಮ್ಮ ಹಾಡಿನಲ್ಲಿ ಬರೆದಿದ್ದರು. ಇದರಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳ ಮನಸ್ಥಿತಿಯನ್ನು ಬಿಂಬಿಸಲಾಗಿತ್ತು.