Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹುಲಿರಾಯ' ನಟ ಬಾಲು ನಾಗೇಂದ್ರ ವಿರುದ್ಧ ಪತ್ನಿ ದೂರು
ಸಿನಿಮಾ ಜಗತ್ತಿನಲ್ಲಿ ದಾಂಪತ್ಯ ಕಲಹ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಸ್ಯಾಂಡಲ್ ವುಡ್ ನ ಸ್ಟಾರ್ ನಟರು ಎನಿಸಿಕೊಂಡಿರುವ ಕೆಲವರ ಮೇಲೆ ಪತ್ನಿ ಮೇಲೆ ಹಲ್ಲೆ ಮಾಡಿದ ಆರೋಪಗಳಿವೆ. ಇದೀಗ, ಈ ಪಟ್ಟಿಗೆ ಮತ್ತೊಬ್ಬ ನಟ ಸೇರಿಕೊಂಡಿದ್ದಾರೆ.
'ಹುಲಿರಾಯ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಬಾಲು ನಾಗೇಂದ್ರ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಾಲು ನಾಗೇಂದ್ರ ಅವರ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್, ದುನಿಯಾ ವಿಜಿ ದಾಂಪತ್ಯ ಕಲಹ ಬಯಲು ಮಾಡಿದ ರವಿ ಬೆಳಗೆರೆ
ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಅವರ ಪತ್ನಿ ಪ್ರತಿ ತಿಂಗಳು ತವರು ಮನೆಗೆ ಒಂದಿಷ್ಟು ಹಣ ಕಳುಹಿಸುತ್ತಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ನಟ, ಪತ್ನಿ ಮೇಲೆ ಹಲ್ಲೆ ಮಾಡಿದ್ದಾರಂತೆ. ಬಲವಂತವಾಗಿ ಕೆಲಸಕ್ಕೆ ಹೋಗು ಎಂದು ಒತ್ತಡ ಹಾಕುತ್ತಿದ್ದ ನಟ ಕೆಲಸಕ್ಕೆ ಕರೆದುಕೊಂಡು ಹೋಗುವಾಗಲೂ ಥಳಿಸುತ್ತಿದ್ದ ಎಂದು ಪತ್ನಿ ದೂರಿದ್ದಾಳೆ.
ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಬುಸುಗುಟ್ಟಿದ 'ಬ್ಲ್ಯಾಕ್ ಕೋಬ್ರ'
ಕೆಲಸಕ್ಕೆ ಹೋಗುವುದಿಲ್ಲ, ನಾನು ಓದುತ್ತೇನೆ ಎಂದಾಗಲೂ, ಇಲ್ಲ ಕೆಲಸಕ್ಕೆ ಹೋಗಲೇಬೇಕು ಎಂದು ಒತ್ತಡ ಹಾಕಿ ಕಳುಹಿಸುತ್ತಿದ್ದ. ಈಗ ನನ್ನ ಮತ್ತು ಮಗು ಮೇಲೆ ಹಲ್ಲೆ ಮಾಡಿ ತವರು ಮನಗೆ ಕಳುಹಿಸಿದ್ದಾನೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಾಲು ನಾಗೇಂದ್ರ ಅವರ ಪತ್ನಿ ನೀಡಿದ ದೂರಿನ ಅನ್ವಯ ಬಸವನಗುಡಿ ಮಹಿಳಾ ಪೊಲೀಸರು ಸೆಕ್ಷನ್ 498ಎ ಪ್ರಕಾರ ಕೇಸ್ ದಾಖಲಿಸಿಕೊಂಡಿದ್ದಾರೆ. ಹುಲಿರಾಯ ಚಿತ್ರದ ಜೊತೆಗೆ ಕಪಟನಾಟಕ ಪಾತ್ರಧಾರಿ, ಕಡ್ಡಿಪುಡಿ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಬಾಲು ನಾಗೇಂದ್ರ ನಟಿಸಿದ್ದಾರೆ.