Don't Miss!
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪ್ರೇಮ್ ಅಡ್ಡ' ವಿರುದ್ಧ ತನಿಖೆಗೆ ಕೋರ್ಟ್ ಆದೇಶ
ಪ್ರೇಮ್ ಅಡ್ಡ ಹಾಡಿನ ವಿರುದ್ಧ ವಕೀಲ ಎನ್.ಪಿ.ಅಮೃತೇಶ್ ಅವರು ಖಾಸಗಿ ದೂರು ಸಲ್ಲಿಸಿದ್ದರು. ಅವರ ದೂರನ್ನು ಆಲಿಸಿದ ನ್ಯಾಯಾಲಯ ಚಿತ್ರತಂಡದ ವಿರುದ್ಧ ತನಿಖೆ ನಡೆಸಿ ಏ.18ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ.
ಈ ಹಾಡಿಗೆ ಕಾರಣಕರ್ತರಾದ ಚಿತ್ರದ ನಿರ್ಮಾಪಕ ಮುರಳಿಕೃಷ್ಣ, ನಿರ್ದೇಶಕ ಮಹೇಶ್ ಬಾಬು, ಗೀತ ರಚನೆಕಾರ ಮಳವಳ್ಳಿ ಸಾಯಿಕೃಷ್ಣ, ಗಾಯಕ ರಾಜು ತಾಳಿಕೋಟೆ, ಸಂಗೀತ ನಿರ್ದೇಶಕ ಹರಿಕೃಷ್ಣ, ಆನಂದ್ ಆಡಿಯೋ ಮಾಲೀಕ ಮೋಹನ್ ಛಾಬ್ರಿಯಾ ಅವರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
ಈ ಹಿಂದೆಯೇ ದೂರು ದಾಖಲಾಗಿದ್ದರೂ ಕ್ರಮಕೈಗೊಳ್ಳದ ಉಪ್ಪಾರಪೇಟೆ ಪೊಲೀಸರ ಮೇಲೂ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ನೇತೃತ್ವದಲ್ಲಿ ತಂಡ ರಚಿಸಿ ವಿಚಾರಣೆ ನಡೆಸುವಂತೆ ಸೂಚಿಸಿ ವಿಚಾರಣೆಯನ್ನು ಜೂ.6ಕ್ಕೆ ಮುಂದೂಡಿದೆ.
ಪ್ರೇಮ್ ಅಡ್ಡ ಚಿತ್ರದ ಹಾಡಿನಲ್ಲಿ ಮಹಿಳೆಯರು ಮತ್ತು ಹಿಂದೂಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ ಎ, 260, 294, 499, 503 ಹಾಗೂ 204 ಅಡಿ ದೂರು ದಾಖಲಿಸಲಾಗಿದೆ. (ಏಜೆನ್ಸೀಸ್)