Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಪ್ರೇಮ್ ಮತ್ತು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು.!
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸುದ್ದಿ ಮಾಡಿದ 'ದಿ ವಿಲನ್' ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದಾರೆ.
'ದಿ ವಿಲನ್' ಚಿತ್ರದಲ್ಲಿರುವ ದೃಶ್ಯವೊಂದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿರ್ದೇಶಕ ಪ್ರೇಮ್ ಮತ್ತು ಸುದೀಪ್ ವಿರುದ್ಧ ನಾಗೇಶ್ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ್ದಾರೆ.
'ದಿ ವಿಲನ್' ತಂಡದ ಮೇಲೆ ಬೇಸರಗೊಂಡರಾ ಸುದೀಪ್?
'ದಿ ವಿಲನ್' ಚಿತ್ರದ ದೃಶ್ಯವೊಂದರಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆ ಸುತ್ತುಕೊಂಡಿರುತ್ತಾರೆ. ಇದು ಕನ್ನಡ ಬಾವುಟಕ್ಕೆ ಮಾಡಿರುವ ಅವಮಾನ ಎಂದು ಆರೋಪಿಸಿ ಸುದೀಪ್ ಮತ್ತು ಪ್ರೇಮ್ ವಿರುದ್ಧ ನಾಗೇಶ್ ಕಂಪ್ಲೇಂಟ್ ಮಾಡಿದ್ದಾರೆ.
ಈ ಬಗ್ಗೆ ಪ್ರೇಮ್ ಮತ್ತು ಸುದೀಪ್ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಆಗ್ರಹಿಸಿದ್ದಾರೆ. ಒಂದು ವೇಳೆ ಕ್ಷಮೆ ಕೇಳದೇ ಇದ್ದರೆ, ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲ್ಲ ಅಂತ ತಿಳಿಸಿದ್ದಾರೆ.
'ದಿ ವಿಲನ್' ಚಿತ್ರವನ್ನ ಉದಾರವಾಗಿ ಬರಮಾಡಿಕೊಂಡ ಎಲ್ಲರಿಗೂ ಪ್ರೀತಿಯ ಅಪ್ಪುಗೆ ನೀಡಿದ ಸುದೀಪ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯದ 'ದಿ ವಿಲನ್' ಸಿನಿಮಾ ಅಕ್ಟೋಬರ್ 18 ರಂದು ದಸರಾ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿತ್ತು. ಅಂದಿನಿಂದ ಒಂದಲ್ಲಾ ಒಂದು ವಿವಾದದಿಂದ 'ದಿ ವಿಲನ್' ಸದ್ದು ಮಾಡುತ್ತಿದೆ.