Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಪ್ರೇಮ್ ಮತ್ತು ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು.!
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸುದ್ದಿ ಮಾಡಿದ 'ದಿ ವಿಲನ್' ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದಾರೆ.
'ದಿ ವಿಲನ್' ಚಿತ್ರದಲ್ಲಿರುವ ದೃಶ್ಯವೊಂದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿರ್ದೇಶಕ ಪ್ರೇಮ್ ಮತ್ತು ಸುದೀಪ್ ವಿರುದ್ಧ ನಾಗೇಶ್ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ್ದಾರೆ.
'ದಿ ವಿಲನ್' ತಂಡದ ಮೇಲೆ ಬೇಸರಗೊಂಡರಾ ಸುದೀಪ್?
'ದಿ ವಿಲನ್' ಚಿತ್ರದ ದೃಶ್ಯವೊಂದರಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆ ಸುತ್ತುಕೊಂಡಿರುತ್ತಾರೆ. ಇದು ಕನ್ನಡ ಬಾವುಟಕ್ಕೆ ಮಾಡಿರುವ ಅವಮಾನ ಎಂದು ಆರೋಪಿಸಿ ಸುದೀಪ್ ಮತ್ತು ಪ್ರೇಮ್ ವಿರುದ್ಧ ನಾಗೇಶ್ ಕಂಪ್ಲೇಂಟ್ ಮಾಡಿದ್ದಾರೆ.
ಈ ಬಗ್ಗೆ ಪ್ರೇಮ್ ಮತ್ತು ಸುದೀಪ್ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಆಗ್ರಹಿಸಿದ್ದಾರೆ. ಒಂದು ವೇಳೆ ಕ್ಷಮೆ ಕೇಳದೇ ಇದ್ದರೆ, ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲ್ಲ ಅಂತ ತಿಳಿಸಿದ್ದಾರೆ.
'ದಿ ವಿಲನ್' ಚಿತ್ರವನ್ನ ಉದಾರವಾಗಿ ಬರಮಾಡಿಕೊಂಡ ಎಲ್ಲರಿಗೂ ಪ್ರೀತಿಯ ಅಪ್ಪುಗೆ ನೀಡಿದ ಸುದೀಪ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯದ 'ದಿ ವಿಲನ್' ಸಿನಿಮಾ ಅಕ್ಟೋಬರ್ 18 ರಂದು ದಸರಾ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿತ್ತು. ಅಂದಿನಿಂದ ಒಂದಲ್ಲಾ ಒಂದು ವಿವಾದದಿಂದ 'ದಿ ವಿಲನ್' ಸದ್ದು ಮಾಡುತ್ತಿದೆ.