Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ವಿನೋದ್ ಪ್ರಭಾಕರ್ ನಿವಾಸಕ್ಕೆ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ
ರಾಜರಾಜೇಶ್ವರಿ ನಗರ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಪಾಲಿಗೆ ಪ್ರತಿಷ್ಠೆಯಾಗಿರುವ ಆರ್ ಆರ್ ನಗರ ಚುನಾವಣೆಯಲ್ಲಿ ಸಿನಿಮಾ ಸ್ಟಾರ್ಸ್ ಸಹ ಭಾಗಿಯಾಗುವ ಲಕ್ಷಣಗಳು ಕಂಡು ಬರುತ್ತಿದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರ ಕನ್ನಡದ ಸ್ಟಾರ್ ನಟರು ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಬೆನ್ನಲ್ಲೆ ಕಾಂಗ್ರೆಸ್ ಪಾಳಯದಲ್ಲೂ ಅಂತಹದೊಂದು ಬೆಳವಣಿಗೆ ಕಂಡು ಬರುತ್ತಿದೆ.
ನೆನಪಿರಲಿ ಪ್ರೇಮ್ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ: ಕಾರಣವೇನು?
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಆರ್ ನಗರದಲ್ಲಿರುವ ಸಿನಿಮಾ ಕಲಾವಿದರ ಮನೆಗೆ ಭೇಟಿ ನೀಡಿ ಕುತೂಹಲ ಕೆರಳಿಸುತ್ತಿದ್ದಾರೆ.
ಆರ್ ಆರ್ ನಗರದಲ್ಲಿ ವಿನೋದ್ ಪ್ರಭಾಕರ್ ನಿವಾಸಕ್ಕೆ ಇಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು, ಪ್ರಭಾಕರ್ ಮನೆಯಲ್ಲಿಯೇ ಭೋಜನ ಸಹ ಸವಿದರು. ಈ ಭೇಟಿ ಹಿಂದಿನ ಅಸಲಿ ಕಾರಣ ಏನು ಎಂಬುದು ತಿಳಿದಿಲ್ಲ ಆದರೂ ಚುನಾವಣೆ ಸಮಯದಲ್ಲಿ ಚರ್ಚೆಗೆ ಕಾರಣವಾಗಿದೆ.
Recommended Video
ಕಳೆದ ವಾರ ನಟ ನೆನಪಿರಲಿ ಪ್ರೇಮ್ ಅವರ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ನಾಗರಭಾವಿಯಲ್ಲಿರುವ ಪ್ರೇಮ್ ನಿವಾಸಕ್ಕೆ ಡಿಕೆಶಿ ಹೋಗಿದ್ದರು. ಆಗಲೂ ಇದು ಚುನಾವಣೆ ಉದ್ದೇಶಕ್ಕಾಗಿ ಎಂದು ಹೇಳಲಾಗಿತ್ತು.