Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಚ್ಚ ವೆಂಕಟ್ ಅವರ 'ಡಿಕ್ಟೇಟರ್' ಸಿನಿಮಾ ಅರ್ಧಕ್ಕೆ ನಿಂತು ಹೋಯ್ತಾ?
ಬಿಗ್ ಬಾಸ್ ಮೂಲಕ ಗಾಸಿಪ್ ರಾಜ ಆದ ನಟ ಕಮ್ ನಿರ್ದೇಶಕ ಹುಚ್ಚ ವೆಂಕಟ್ ಸ್ವಲ್ಪ ದಿನಗಳ ಕಾಲ ಸೈಲೆಂಟ್ ಆಗಿದ್ದವರು ಇದೀಗ ಮತ್ತೆ ವೈಲೆಂಟ್ ಆಗಿದ್ದಾರೆ. ಈ ಮೊದಲು 'ಫೈರಿಂಗ್ ಸ್ಟಾರ್' ವೆಂಕಟ್ ಅವರು ನಟ ಕಮ್ ನಿರ್ದೇಶಕ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರ ಜೊತೆ ಸಿನಿಮಾ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು.
ಇದೀಗ ಹೊಸ ಸುದ್ದಿ ಏನಪ್ಪಾ ಅಂದ್ರೆ ಎಸ್ ನಾರಾಯಣ್ ಅವರ ಜೊತೆ ಸೇರಿಕೊಂಡು ಹುಚ್ಚ ವೆಂಕಟ್ ಅವರು ಮಾಡಬೇಕಾಗಿದ್ದ 'ಡಿಕ್ಟೇಟರ್' ಸಿನಿಮಾವನ್ನು ಅವರು ಮುಂದುವರಿಸುತ್ತಿಲ್ಲವಂತೆ. ಮಾತ್ರವಲ್ಲದೇ, ಅವರ ಜೊತೆ ಕೆಲಸ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂದು ವೆಂಕಟ್ ಅವರು ನುಡಿದಿದ್ದಾರೆ.[ಹುಚ್ಚ ವೆಂಕಟ್ ಚಿತ್ರಕ್ಕೆ 'ಬಿಗ್ ಬಾಸ್' ಗೌತಮಿ ಹೀರೋಯಿನ್!]
'ಡಿಕ್ಟೇಟರ್' ಚಿತ್ರಕ್ಕೆ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ಆಕ್ಷನ್-ಕಟ್ ಹೇಳಬೇಕಿದ್ದು, ನಿರ್ಮಾಪಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಾಜಿ ಅಧ್ಯಕ್ಷ ಬಿ ವಿಜಯ್ ಕುಮಾರ್ ಅವರು ಬಂಡವಾಳ ಹೂಡಬೇಕಾಗಿತ್ತು.['ಡಿಕ್ಟೇಟರ್' ಆದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್]
ಆದರೆ ವಿಪರ್ಯಾಸ ಎಂದರೆ ಇದೀಗ ಸಿನಿಮಾ ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ಬಂದೊದಗಿದೆ. 'ಡಿಕ್ಟೇಟರ್' ಸಿನಿಮಾ ಮಾಡುತ್ತೇನೆ ಎಂದು ಹೇಳಿ ಕಾಲ್ ಶೀಟ್ ಪಡೆದು ನನ್ನ ಸಮಯ ವ್ಯರ್ಥ ಮಾಡಿದ್ದಕ್ಕೆ ನಾನು ಚಿತ್ರದಿಂದ ಹೊರಬಂದಿದ್ದೇನೆ' ಎಂದು ಫೈರಿಂಗ್ ಸ್ಟಾರ್ ವೆಂಕಟ್ ಅವರು ಎಸ್ ನಾರಾಯಣ್ ಅವರ ಮೇಲೆ ಸಖತ್ ಫೈರ್ ಮಾಡಿದ್ದಾರೆ.[ವೆಂಕಟ್ 'ಡಿಕ್ಟೇಟರ್'ಗೆ ಎಸ್.ನಾರಾಯಣ್ ಆಕ್ಷನ್-ಕಟ್]
'ಯಾರಿಗೂ ನಾನು ತಗ್ಗಿ-ಬಗ್ಗಿ ನಡೆಯುವುದಿಲ್ಲ, ಆದ್ದರಿಂದ ನನ್ನಿಷ್ಟದಂತೆ ನನ್ನ ಬ್ಯಾನರ್ ನ ಚಿತ್ರಗಳಲ್ಲಿ ಮಾತ್ರ ನಾನು ಅಭಿನಯಿಸುತ್ತೇನೆ. 'ಡಿಕ್ಟೇಟರ್' ಚಿತ್ರಕ್ಕೆ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದರು. ಆ ಚಿತ್ರದಲ್ಲಿ ನಾನು ಅಭಿನಯಿಸುತ್ತಿದ್ದೇನೆ ಎಂಬ ಕಾರಣಕ್ಕೆ ಸಂತೋಷಗೊಂಡಿದ್ದರೇ ಹೊರತು ಎಸ್ ನಾರಾಯಣ್ ನಿರ್ದೇಶನದ ಚಿತ್ರ ಅಂತಲ್ಲ' ಎಂದು ವೆಂಕಟ್ ಗುಡುಗಿದ್ದಾರೆ.