Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಥೆ-ಚಿತ್ರಕಥೆ-ನಿರ್ದೇಶನ 'ಪುಟ್ಟಣ್ಣ' ಸುತ್ತ ಹೊಸ ವಿವಾದ!
ನಿರ್ದೇಶಕ ಶ್ರೀನಿವಾಸ್ ರಾಜು ರವರಿಗೂ ವಿವಾದಕ್ಕೂ ಒಂಥರಾ ಬಿಡಿಸಲಾರದ ನಂಟು. ಶ್ರೀನಿವಾಸ್ ರಾಜು ಯಾವುದೇ ಸಿನಿಮಾ ಮಾಡಿದರೂ, ಒಂದಲ್ಲಾ ಒಂದು ಕಾಂಟ್ರವರ್ಸಿಯಿಂದ ಸದ್ದು ಮಾಡ್ತಾರೆ.
ಅದಕ್ಕೆ 'ಕಥೆ-ಚಿತ್ರಕಥೆ-ನಿರ್ದೇಶನ ಪುಟ್ಟಣ್ಣ' ಸಿನಿಮಾ ಕೂಡ ಹೊರತಾಗಿಲ್ಲ. ಔಟ್ ಅಂಡ್ ಔಟ್ ಹಾರರ್ ಕಾಮಿಡಿ ಆಗಿರುವ 'ಕಥೆ-ಚಿತ್ರಕಥೆ-ನಿರ್ದೇಶನ ಪುಟ್ಟಣ್ಣ' ಸಿನಿಮಾದಲ್ಲಿ ಏನಿದೆಯೋ ಗೊತ್ತಿಲ್ಲ. ಆದ್ರೆ, ಚಿತ್ರದ ಶೀರ್ಷಿಕೆ ಬಗ್ಗೆ ಮಾತ್ರ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಕುಟುಂಬ ಆಕ್ಷೇಪ ವ್ಯಕ್ತಪಡಿಸಿದೆ.['ಪುಟ್ಟಣ್ಣ' ನ ಅವತಾರ ಎತ್ತಿದ ಕಾಮಿಡಿ ಕಿಂಗ್ ಕೋಮಲ್!]
''ಪುಟ್ಟಣ್ಣ ಕಣಗಾಲ್ ಹೆಸರಿಟ್ಟುಕೊಂಡು ಸಿನಿಮಾ ಮಾಡುವ ಅವಶ್ಯಕತೆ ಏನಿದೆ. ಸಿನಿಮಾದಲ್ಲಿ ಅವರ ಕುರಿತು ಏನಿದೆ ಎಂಬುದನ್ನ ನಾವು ನೋಡಬೇಕು. ಒಂದ್ವೇಳೆ ಸಿನಿಮಾದಲ್ಲಿ ಪುಟ್ಟಣ್ಣ ಕುರಿತು ಅವಹೇಳನ ಮಾಡಿದ್ದರೆ, ಸಿನಿಮಾ ಬಿಡುಗಡೆ ಮಾಡುವುದಕ್ಕೆ ಬಿಡುವುದಿಲ್ಲ'' ಅಂತ ಪುಟ್ಟಣ್ಣ ಕಣಗಾಲ್ ಪತ್ನಿ ನಾಗಲಕ್ಷ್ಮೀ ಹೇಳುತ್ತಾರೆ.
ಸಿನಿಮಾ ತೋರಿಸುವವರೆಗೂ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಅಂತ ಪುಟ್ಟಣ್ಣ ಕಣಗಾಲ್ ಕುಟುಂಬ ಪಟ್ಟು ಹಿಡಿದಿರುವ ಕಾರಣ, ಸ್ಪೆಷಲ್ ಸ್ಕ್ರೀನಿಂಗ್ ಮಾಡುವ ಬಗ್ಗೆ ಚಿತ್ರತಂಡ ವ್ಯವಸ್ಥೆ ಮಾಡುತ್ತಿದೆ.[ಹಾಲಿವುಡ್ ಮಾಷ್ ಕಾಲೆಳೆದ, ಕೋಮಲ್ ಹೊಸ ಚಿತ್ರದ ಪೋಸ್ಟರ್]
''ಚಿತ್ರಕ್ಕೂ ಪುಟ್ಟಣ್ಣ ಕಣಗಾಲ್ ರವರಿಗೂ ಯಾವುದೇ ಸಂಬಂಧವಿಲ್ಲ. ಇದೊಂದು ಹಾರರ್ ಕಾಮಿಡಿ ಸಿನಿಮಾ. ಬಿಡುಗಡೆಗೂ ಮುನ್ನ ಪುಟ್ಟಣ್ಣ ಸರ್ ಕುಟುಂಬಕ್ಕೆ ಖಂಡಿತ ಸಿನಿಮಾ ತೋರಿಸುತ್ತೇವೆ'' ಅಂತಾರೆ ನಟ ಕೋಮಲ್.
ಇದೇ ಮೊದಲ ಬಾರಿಗೆ ಕೋಮಲ್ ಜೊತೆ ನಟಿ ಪ್ರಿಯಾಮಣಿ ನಟಿಸಿರುವ ಸಿನಿಮಾ 'ಕಥೆ-ಚಿತ್ರಕಥೆ-ನಿರ್ದೇಶನ ಪುಟ್ಟಣ್ಣ'. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬಿಜಿಯಾಗಿದೆ.