Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಚಾರದ ನಡುವೆಯೂ ಕೊರೊನಾ ಜಾಗೃತಿ ಮೂಡಿಸಿದ ನಟ ದರ್ಶನ್
ಚುನಾವಣೆ ಪ್ರಚಾರದ ವೇಳೆ ಸಾಮಾಜಿಕ ಅಂತರದ ಅರಿವೇ ಇಲ್ಲದೇ ನಡೆದುಕೊಳ್ಳುತ್ತಿರುವ ರಾಜಕಾರಣಿಗಳು, ಸಾರ್ವಜನಿಕರನ್ನು ನೋಡಬಹುದು. ಹೆಸರಿಗೆ ಮಾಸ್ಕ್ ಧರಿಸಿದ್ದರು, ಸರಿಯಾದ ರೀತಿಯಲ್ಲಿ ಮಾಸ್ಕ್ ಬಳಸದೇ ಇರುವುದು ಸಹ ಕಂಡು ಬಂದಿದೆ.
Recommended Video
ಹಾಗಿದ್ದರೂ ಚುನಾವಣೆ ಪ್ರಚಾರ ಮಾತ್ರ ಜೋರಾಗಿ ನಡೆಯುತ್ತಿದೆ. ಇಂದು ಆರ್ ಆರ್ ನಗರದ ವಾರ್ಡ್ಗಳಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಚಾಲೆಂಜಿಂಗ್ ದರ್ಶನ್ ಮತಯಾಚನೆ ಮಾಡುತ್ತಿದ್ದಾರೆ.
ಮುನಿರತ್ನ ಪರ ನಟ ದರ್ಶನ್ ಪ್ರಚಾರ ಮಾಡೋದಕ್ಕೆ ಅದೊಂದೇ ಕಾರಣ!
ದರ್ಶನ್ ಅವರು ಪ್ರಚಾರಕ್ಕೆ ಬರುತ್ತಿದ್ದಾರೆ ಎಂದು ತಿಳಿದ ಜನರು ಹಾಗೂ ಡಿ ಬಾಸ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಈ ವೇಳೆ ದರ್ಶನ್ ಅವರು ಮುನಿರತ್ನ ಪರ ಮತಯಾಚಿಸುವುದು ಮಾತ್ರವಲ್ಲದೇ ಜನರಲ್ಲಿ ಕೊರೊನಾ ಕುರಿತು ಜಾಗೃತಿ ಸಜ ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ತೆರೆದ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ದರ್ಶನ್ ಅಭಿಮಾನಿಗಳ ಕಡೆ ಕೈ ಬೀಸಿ ಮಾತನಾಡಿಸಿ, ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ.
ಕೊರೊನಾ ಲಾಕ್ಡೌನ್ ವೇಳೆ ಸಂಕಷ್ಟದಲ್ಲಿದ್ದವರಿಗೆ ಮುನಿರತ್ನ ಅವರು ಸಹಾಯ ಮಾಡಿದ್ದರು. ಹಸಿದವರಿಗೆ ಊಟ ನೀಡಿದ್ದರು. ಮಾನವೀಯತೆ ದೃಷ್ಟಿಯಿಂದ ಅವರಿಗಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ನಟ ದರ್ಶನ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ದರ್ಶನ್ ಅವರ ಜೊತೆ ನಟಿ ಅಮೂಲ್ಯ ಸಹ ಸಾಥ್ ನೀಡಿದರು. ಅಮೂಲ್ಯ ಅವರು ಸಹ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದರು. ರಾತ್ರಿಯವರೆಗೂ ಆರ್ ಆರ್ ನಗರದ ಎಲ್ಲ ವಾರ್ಡ್ಗಳಲ್ಲಿ ನಟ ದರ್ಶನ್ ಪ್ರಚಾರ ಮಾಡಲಿದ್ದಾರೆ.