Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರ್ಷಿಕಾ ಮಾಡಿದ ಸಹಾಯ ನೆನೆದು ಮಗುವಿಗೆ ನಟಿಯದ್ದೇ ಹೆಸರಿಟ್ಟ ಪೋಷಕರು
ಕೊಡಗಿನ ಸುಂದರಿ, ನಟಿ ಹರ್ಷಿಕಾ ಪೂಣಚ್ಚ ಈ ಲಾಕ್ಡೌನ್ ಅವಧಿಯಲ್ಲಿ ತಮ್ಮನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಕೊಡಗು, ಬೆಂಗಳೂರು ಸೇರಿದಂತೆ ಇನ್ನು ಕೆಲವು ಕಡೆಗಳಿಗೆ ತೆರಳಿ ಬಡವರಿಗೆ ಉಚಿತ ದಿನಸಿ ವಿತರಣೆ ಮಾಡುವ ಜೊತೆಗೆ, ಕೋವಿಡ್ ರೋಗಿಗಳಿಗೆಂದು ಆಮ್ಲಜನಕ ಪೂರೈಕೆ, ಉಚಿತ ಆಂಬುಲೆನ್ಸ್ ವ್ಯವಸ್ಥೆ ಇನ್ನಿತರೆ ಸೇವೆಗಳನ್ನು ಹರ್ಷಿಕಾ ಪೂಣಚ್ಚ ಮಾಡಿದ್ದಾರೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೂ ತೆರಳಿ ಅಲ್ಲಿಯೂ ಸಹಾಯ ಮಾಡಿದ್ದಾರೆ.
ಹರ್ಷಿಕಾ ಪೂಣಚ್ಚ ಅವರ ಈ ಸೇವಾ ಕಾರ್ಯದಲ್ಲಿ ನಟ ಭುವನ್ ಪೊನ್ನಪ್ಪ ಸಹ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಹರ್ಷಿಕಾ ಮತ್ತು ಭುವನ್ ಅವರು ಉತ್ತರ ಕರ್ನಾಟಕದಲ್ಲಿ ಕೊರೊನಾ ಜಾಗೃತಿ ಪ್ರವಾಸದಲ್ಲಿದ್ದಾಗ ಬೆಳಗಾವಿ ಜಿಲ್ಲೆಯ ಸವಸುದ್ದಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಅಗತ್ಯ ನೆರವು ನೀಡಿದ್ದರು. ಆ ಗ್ರಾಮದಲ್ಲಿ 80 ಮಂದಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದರು.
ಊರಿನ ಜನರೊಟ್ಟಿಗೆ ಮಾತನಾಡಿದ ಹರ್ಷಿಕಾ ಹಾಗೂ ಭುವನ್ ಊರ ಜನರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಿದ್ದಾರೆ. ಮಾಸ್ಕ್ನ ಮಹತ್ವವನ್ನು ಸಾರಿ ಹೇಳಿದ್ದಾರೆ. ಹರ್ಷಿಕಾ ಅವರ ಸೇವೆಯನ್ನು ಮೆಚ್ಚಿದ ಅದೇ ಊರಿನ ದಂಪತಿಯೊಬ್ಬರು ತಮಗೆ ಹುಟ್ಟಿದ ಹೆಣ್ಣು ಮಗುವಿ ಹರ್ಷಿಕಾ ಎಂದೇ ನಾಮಕರಣ ಮಾಡಿದ್ದಾರೆ.
ಹರ್ಷಿಕಾ ನಮ್ಮ ಊರಿಗೆ ಬಂದು ನಮಗೆ ಸಹಾಯ ಮಾಡಿದ್ದಾರೆ. ನಮಗೆ ಸಾಂತ್ವಾನ ಹೇಳಿದ್ದಾರೆ. ಹಾಗಾಗಿ ನಮ್ಮ ಮಗಳೂ ಸಹ ಹಾಗೆಯೇ ಆಗಬೇಕು ಎಂದು ಮಗಳಿಗೆ ಹರ್ಷಿಕಾ ಎಂದು ನಾಮಕರಣ ಮಾಡಿದ್ದಾಗಿ ಹೇಳಿದ್ದಾರೆ. ಹೀಗೆ ನಾಮಕರಣ ಮಾಡುವುದರ ಹಿಂದೆ ಮಗುವಿನ ಚಿಕ್ಕಪ್ಪನ ಒತ್ತಾಸೆಯೂ ಇದೆ.
Recommended Video
ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹರ್ಷಿಕಾ ಪೂಣಚ್ಚ, 'ನನ್ನ ಜೀವನಕ್ಕೆ ಹೊಸ ಅರ್ಥ ಸಿಕ್ಕಿರುವ ಹಾಗಿದೆ , ಈ ಮುದ್ದು ಪುಟಾಣಿ ಕಂದಮ್ಮನಿಗೆ ನನ್ನ ಹೆಸರು ಇಟ್ಟಿದ್ದಾರೆ .ನಿಮ್ಮ ಪ್ರೀತಿಗೆ ನನ್ನ ಮನಸ್ಸು ತುಂಬಿದೆ . ಈ ವಿಶ್ವಾಸಕ್ಕೆ ನಾನೆಂದು ಚಿರಋಣಿ' ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮಗುವಿನ ಚಿತ್ರವನ್ನೂ ಹಂಚಿಕೊಂಡಿದ್ದಾರೆ.