Don't Miss!
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- News Water Crisis: ಜಲಕ್ಷಾಮ ತಡೆಗೆ ಜಲಸಂರಕ್ಷಣೆಯೇ ಪರಿಹಾರ: ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರು.10 ಕೋಟಿ ಠೇವಣಿ ಇಡುವ ಮೂಲಕ 'ಲಿಂಗಾ' ತೆರೆಗೆ
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಭಾರಿ ಬಜೆಟ್ ಚಿತ್ರ 'ಲಿಂಗಾ' ಇದೇ ಶುಕ್ರವಾರ (ಡಿ.12) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೆ ಈ ಚಿತ್ರಕ್ಕೆ ಹಲವಾರು ವಿಘ್ನಗಳು ಎದುರಾಗಿದ್ದು ಗೊತ್ತೇ ಇದೆ. ಅವುಗಳಲ್ಲಿ ಕೃತಿಚೌರ್ಯ ವಿವಾದವೂ ಒಂದು.
ತನ್ನ ಕಥೆಯನ್ನು ಕದ್ದು 'ಲಿಂಗಾ' ಚಿತ್ರ ಮಾಡುತ್ತಿದ್ದಾರೆ ಎಂದು ರವಿರತ್ನಂ ಎಂಬುವವರು ಕೋರ್ಟ್ ಮೆಟ್ಟಿಲೇರಿದ್ದರು. ಈ ಕೇಸಿಗೆ ಸಂಬಂಧಿಸಿದಂತೆ 'ಲಿಂಗಾ' ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರಿಗೆ ರು.10 ಕೋಟಿ ಠೇವಣಿ (ರು.5 ಕೋಟಿ ನಗದು ಹಾಗೂ ರು.5 ಕೋಟಿ ಬ್ಯಾಂಕ್ ಖಾತ್ರಿ) ಇಡುವಂತೆ ಚೆನ್ನೈ ಹೈಕೋರ್ಟ್ ನ ಮಧುರೈ ಪೀಠ ಸೂಚಿಸಿದೆ. [ಮೈನವಿರೇಳಿಸುವ ರಜನಿ 'ಲಿಂಗಾ' ಚಿತ್ರದ ಹೈಲೈಟ್ಸ್]
ಈ ಬಗ್ಗೆ ಕೂಡಲೆ ಪ್ರತಿಕ್ರಿಯಿಸಿರುವ ರಾಕ್ ಲೈನ್ ವೆಂಕಟೇಶ್, "ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇವೆ. ನ್ಯಾಯಾಲಯದ ಆದೇಶದಂತೆ ದುಡ್ಡು ಕಟ್ಟುತ್ತೇವೆ. ಚಿತ್ರವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುತ್ತಿದ್ದೇವೆ" ಎಂದಿದ್ದಾರೆ. ರಜನಿಕಾಂತ್ ಅವರ 63ನೇ ಹುಟ್ಟುಹಬ್ಬದ ದಿನ ಅಂದರೆ ಡಿಸೆಂಬರ್ 12ರಂದು ಚಿತ್ರ ಬಿಡುಗಡೆಯಾಗುತ್ತಿದೆ.
ಮುಳ್ಳಪೆರಿಯಾರ್ ಅಣೆಕಟ್ಟು ನಿರ್ಮಾಣದ ಹಿಂದಿರುವ ಪೆನ್ನಿಕ್ವಿಕ್ ಎಂಬ ಬ್ರಿಟಿಷ್ ಇಂಜಿನಿಯರ್ ಕುರಿತ ಕಥೆಯನ್ನು ತಮ್ಮ ಕೃತಿ ಒಳಗೊಂಡಿದೆ. ಈಗಾಗಲೆ ಈ ಕಥೆಯನ್ನು ಹಲವಾರು ನಿರ್ದೇಶಕರಿಗೆ ಹೇಳಿದ್ದೇನೆ. ಬಜೆಟ್ ಜಾಸ್ತಿಯಾಗುತ್ತದೆ ಎಂದು ಚಿತ್ರ ನಿರ್ಮಿಸಲು ಯಾರು ಮುಂದೆ ಬರಲಿಲ್ಲ. ತಮ್ಮ ಕಥೆಗೂ ಲಿಂಗಾ ಚಿತ್ರದ ಕಥೆಗೂ ಸಾಮ್ಯತೆಗಳಿರುವುದು ತಮ್ಮ ಗಮನಕ್ಕೆ ಬಂದಿದೆ.
ಈ ಚಿತ್ರ ತಮ್ಮದೇ ಕಥೆಯನ್ನು ಬಳಸಿಕೊಂಡಿರುವ ಕಾರಣ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ರವಿರತ್ನಂ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಮದ್ರಾಸ್ ಸಿಟಿ ಸಿವಿಲ್ ಕೋರ್ಟ್ ಚಿತ್ರದ ನಿರ್ದೇಶಕ ಕೆ.ಎಸ್. ರವಿಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಕಥೆ ಬರೆದಿರುವ ಪೊನ್ನು ಕುಮಾರ್ ಅವರಿಗೆ ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.