Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಮನೆಗೆ ನಾಗರತ್ನ ಹೋಗಬಾರದು: ಇದು ಕೋರ್ಟ್ ಆದೇಶ.!
ದುನಿಯಾ ವಿಜಯ್ ಮನೆಯ ಬೀದಿ ಜಗಳ ನಿಮಗೆಲ್ಲ ಗೊತ್ತೇ ಇದೆ. ಇಬ್ಬರು ಹೆಂಡತಿಯರ ನಡುವೆ ನಡೆದ ರಂಪಾಟವನ್ನ ನೀವೆಲ್ಲ ಕಣ್ತುಂಬಿಕೊಂಡಿದ್ದೀರಾ. ಇಷ್ಟೆಲ್ಲಾ ಆದ್ಮೇಲೆ, ನಾಗರತ್ನ ರಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಕೋರ್ಟ್ ಮೆಟ್ಟಿಲೇರಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ದುನಿಯಾ ವಿಜಯ್ ಮನೆಗೆ ನಾಗರತ್ನ ಹೋಗಬಾರದು ಎಂದು ಆದೇಶಿಸಿದೆ. ಜೊತೆಗೆ ದುನಿಯಾ ವಿಜಯ್ ಹಾಗೂ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನಾಗರತ್ನ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ ಹೇರಿದೆ. ಪ್ರಕರಣದ ವಿಚಾರಣೆ ವೇಳೆ ಕ್ಯಾಮರಾ ಬಳಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ನಾಗರತ್ನಗೆ ಮಾನ ಮರ್ಯಾದೆ ಇದ್ಯಾ ಎಂದು ಸಿಡಿಮಿಡಿಗೊಂಡ ಕೀರ್ತಿ ಗೌಡ.!
ಪ್ರಕರಣದ ಹಿನ್ನಲೆ: ಕಳೆದ ತಿಂಗಳು ದುನಿಯಾ ವಿಜಯ್ ಹಾಗೂ ಕೀರ್ತಿ ಗೌಡ ವಾಸವಿದ್ದ ಮನೆಗೆ ತೆರಳಿದ್ದ ನಾಗರತ್ನ, ಕೀರ್ತಿ ಗೌಡ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದರು.
ನಾಗರತ್ನರಿಂದ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆಹೋದ ದುನಿಯಾ ವಿಜಯ್.!
ಸಿಸಿಟಿವಿ ದೃಶ್ಯಾವಳಿ ಸಮೇತ ಗಿರಿನಗರ ಪೊಲೀಸ್ ಠಾಣೆಗೆ ನಾಗರತ್ನ ವಿರುದ್ಧ ಕೀರ್ತಿ ಗೌಡ ಹಾಗೂ ದುನಿಯಾ ವಿಜಯ್ ದೂರು ನೀಡಿದ್ದರು. ನಾಗರತ್ನ ವಿರುದ್ಧ ಎಫ್.ಐ.ಆರ್. ದಾಖಲಾಗುತ್ತಿದ್ದಂತೆಯೇ, ಆಕೆ ಪರಾರಿಯಾದರು. ಸದ್ಯ ಈ ಪ್ರಕರಣದಲ್ಲಿ ನಾಗರತ್ನಗೆ ಜಾಮೀನು ಸಿಕ್ಕಿದೆ.
ಕೀರ್ತಿ ಗೌಡಗೆ ಚಪ್ಪಲಿ ಥಳಿತ: ಅಂದು ಸುಳ್ಳು ಹೇಳಿದ್ರಾ ನಾಗರತ್ನ.?
ಈ ನಡುವೆ ಕ್ರೌರ್ಯದ ಕಾರಣ ನೀಡಿ ನಾಗರತ್ನ ರಿಂದ ವಿಚ್ಛೇದನ ಕೋರಿ ದುನಿಯಾ ವಿಜಯ್ ಕೋರ್ಟ್ ಮೆಟ್ಟಿಲೇರಿದ್ದರು.