Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾನೂನು ಸಮರದಲ್ಲಿ ಗೆದ್ದ 'ಅಭಿನೇತ್ರಿ' ಪೂಜಾಗಾಂಧಿ
ಮಳೆ ಹುಡುಗಿ ಪೂಜಾಗಾಂಧಿ ಕಾನೂನು ಸಮರದಲ್ಲಿ ಗೆದ್ದಿದ್ದಾರೆ. ಕಡೆಗೂ ತಮ್ಮ ಮಹತ್ವಾಕಾಂಕ್ಷಿ ಚಿತ್ರ ಅಭಿನೇತ್ರಿಯನ್ನು ತೆರೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೃತಿಚೌರ್ಯ ವಿವಾದದ ಕಾರಣ 'ಅಭಿನೇತ್ರಿ' ಚಿತ್ರ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಚಿತ್ರ ಬಿಡುಗಡೆಗೆ ಸಿಟಿ ಸಿವಿಲ್ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಕಳೆದ ಮೂರು ತಿಂಗಳಿಂದ ಪೂಜಾಗಾಂಧಿ ಈ ಚಿತ್ರದ ಬಿಡುಗಡೆಗಾಗಿ ಕೋರ್ಟ್ ಗೆ ಸಾಕಷ್ಟು ಅಲೆದಾಡಿದ್ದರು. ಇದೀಗ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ['ಅಭಿನೇತ್ರಿ' ಪೂಜಾಗಾಂಧಿ ಮೇಲೆ ಕಥೆ ಕದ್ದ ಆರೋಪ]
ಬಳಿಕ ಎರಡನ್ನೂ ತಾಳೆಮಾಡಿ ನೋಡಿದಾಗ ಅಭಿನೇತ್ರಿಯ ಅಂತರಂಗ ಕೃತಿಗೂ ಅಭಿನೇತ್ರಿ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದಾರೆ. ಅಲ್ಲಿಗೆ 'ಅಭಿನೇತ್ರಿ' ಚಿತ್ರದ ವಿವಾದ ಇತ್ಯರ್ಥ್ಯಗೊಂಡಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪೂಜಾಗಾಂಧಿ, ನಾವು ಯಾವುದೇ ಕಥೆ ಕದ್ದಿಲ್ಲ. ಭಾಗ್ಯ ಕೃಷ್ಣಮೂರ್ತಿ ಅವರ ಕೃತಿಗೂ ನಮ್ಮ ಚಿತ್ರಕಥೆಗೂ ಯಾವುದೇ ಸಂಬಂಧ ಇರಲಿಲ್ಲ. ನ್ಯಾಯಾಲಯದ ಮೇಲೆ ನನಗೆ ಅಪಾರ ನಂಬಿಕೆ ಇತ್ತು ಎಂದು ಅವರು ಹೇಳಿದ್ದಾರೆ.
ಶೀಘ್ರದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿಗೆ ಕಳುಹಿಸಲಿದ್ದು, ಇದೇ ತಿಂಗಳಾಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವುದಾಗಿ ಪೂಜಾಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಳಿದಂತೆ ಚಿತ್ರದ ಪ್ರಚಾರಕಾರ್ಯ ಭರದಿಂದ ಸಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.