Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯ: ನಾಳೆ ತೀರ್ಪು
Recommended Video
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನ ಇಂದು ನಡೆಸಿದ ಜೋಧ್ ಪುರ್ ಸೆಷನ್ಸ್ ಕೋರ್ಟ್ ತೀರ್ಪನ್ನ ನಾಳೆಗೆ ಕಾಯ್ದಿರಿಸಿದೆ. ಹೀಗಾಗಿ, ಸಲ್ಮಾನ್ ಖಾನ್ ಮತ್ತೊಂದು ದಿನ ಜೈಲಿನಲ್ಲಿ ಕಳೆಯಬೇಕಿದೆ.
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ ಸಲ್ಲುಗೆ 5 ಐದು ವರ್ಷ ಜೈಲು ಶಿಕ್ಷೆ ನೀಡಿತ್ತು. ತಕ್ಷಣವೇ ಸಲ್ಮಾನ್ ಖಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಕೀಲರ ವಾದ ಆಲಿಸಿತು. ಆದ್ರೆ, ತೀರ್ಪನ್ನ ನಾಳೆಗೆ ಮುಂದೂಡಿದೆ.
ಶನಿವಾರ ಬೆಳಿಗ್ಗೆ 10.30ಕ್ಕೆ ಮತ್ತೆ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ನಡೆಯಲಿದ್ದು, ಆದೇಶವೂ ನಾಳೆಯೇ ಹೊರಬೀಳಲಿದೆ.
ಸಲ್ಮಾನ್ ಕೃಷ್ಣಮೃಗ ಬೇಟೆಯಾಡಲು ಪ್ರಚೋದನೆ ನೀಡಿದ್ದೇ ಈ ನಟಿಯಂತೆ.!
ಸೆಪ್ಟೆಂಬರ್ 26, 1998 ರಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ, ಜೋಧ್ ಪುರ ಬಳಿಯ ಮಥಾನಿಯಾದಲ್ಲಿರುವ ಭವಾದ್ ನಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದ ಆರೋಪ ಸಲ್ಮಾನ್ ಖಾನ್ ಮೇಲಿದೆ.
ಸಲ್ಮಾನ್ ಖಾನ್ ಅವರ ಸಾಮಾಜಿಕ ಕಳಕಳಿ, ಮತ್ತು ಬಾಲಿವುಡ್ ನಿರ್ಮಾಪಕರು ಹೂಡಿರುವ ಬಂಡವಾಳದ ಕಾರಣದಿಂದ ನ್ಯಾಯಾಲಯ ಜಾಮೀನು ನೀಡುತ್ತಾ ಎಂಬುದನ್ನ ಕಾದುನೋಡಬೇಕಿದೆ.