Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಚಿತ್ರಕ್ಕೆ ಸಿಪಿ ಯೋಗೀಶ್ವರ್ ಪುತ್ರಿ ನಿಶಾ
ದರ್ಶನ್ ಮುಖ್ಯಭೂಮಿಕೆಯಲ್ಲಿರುವ 'ಅಂಬರೀಷ' ಚಿತ್ರದಲ್ಲಿ ನಿಶಾ ಅವರು ನಾಯಕಿ ಪಾತ್ರವನ್ನು ಪೋಷಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಟಿ ಪ್ರಿಯಾಮಣಿ ಸಹ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಮಹೇಶ್ ಸುಖಧರೆ.
ಸೌತ್ ಬ್ಯೂಟಿ ಅಮಲಾ ಪೌಲ್ ಅವರನ್ನು ಕರೆತರಲು ಮಹೇಶ್ ಪ್ರಯತ್ನಿಸಿದ್ದರು, ಆದರೆ ಡೇಟ್ಸ್ ಹೊಂದಾಣಿಕೆಯಾಗದೆ ಆ ಜಾಗಕ್ಕೆ ನಿಶಾ ಯೋಗೀಶ್ವರ್ ಅವರನ್ನು ಕರೆತರುತ್ತಿದ್ದಾರೆ. ಸದ್ಯಕ್ಕೆ ಮಾತುಕತೆ ಆಗಿದ್ದು ಕೆಲವೇ ದಿನಗಳಲ್ಲಿ ಎಲ್ಲವೂ ಫೈನಲ್ ಆಗುತ್ತದೆ ಎನ್ನುತ್ತವೆ ಮೂಲಗಳು.
ಇನ್ನೊಂದು ಮೂಲದ ಪ್ರಕಾರ, ಈಗಾಗಲೆ ಇಬ್ಬರೂ 'ಅಂಬರೀಷ' ಚಿತ್ರದಲ್ಲಿ ಅಭಿನಯಿಸಲು ಅಂಕಿತ ಹಾಕಿದ್ದು, ಫೋಟೋಶೂಟ್ ಸಹ ಮುಗಿದಿದೆಯಂತೆ. ಆಗಸ್ಟ್ 15ರಂದು ಚಿತ್ರ ಸೆಟ್ಟೇರುತ್ತಿರುವುದು ಮತ್ತೊಂದು ವಿಶೇಷ.
ಮಹೇಶ್ ಸುಖಧರೆ ಅವರು ಈ ಹಿಂದೆ ಸಿಪಿ ಯೋಗೀಶ್ವರ್ ಅವರೊಂದಿಗೆ 'ಸೈನಿಕ' ಚಿತ್ರ ಮಾಡಿದ್ದರು. ಈಗ ಅವರ ಮಗಳನ್ನು ಬೆಳ್ಳೆಪರದೆಗೆ ಪರಿಚಯಿಸುತ್ತಿದ್ದಾರೆ. ಇನ್ನು ನಿಶಾ ಅವರು 2013ರ ವಿಧಾನಸಭೆ ಚುನಾವಣೆಯಲ್ಲಿ ಅಪ್ಪನ ಪರ ಪ್ರಚಾರದಲ್ಲೂ ಭಾಗಿಯಾಗಿದ್ದರು. (ಏಜೆನ್ಸೀಸ್)