Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆಯ ಅಂತರದಲ್ಲಿ ಪಾರಾದ 'ದಿ ವಿಲನ್' ನಿರ್ಮಾಪಕ
ಶ್ರೀಲಂಕಾದಲ್ಲಿ ನಡೆದಿರುವ ಬಾಂಬ್ ಸ್ಫೋಟದಿಂದ ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಸಿ.ಆರ್. ಮನೋಹರ್ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ ಎಂಬುದು ತಡವಾಗಿ ಬೆಳಕಿದೆ ಬಂದಿದೆ.
ಭಾನುವಾರ ಬೆಳಿಗ್ಗೆ ಶ್ರೀಲಂಕಾದ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಇದರಲ್ಲಿ ಇಬ್ಬರು ಭಾರತೀಯರು ಸೇರಿ ಸುಮಾರು 290ಕ್ಕೂ ಅಧಿಕ ಜನರ ಸಾವನ್ನಪ್ಪಿದ್ದಾರೆ.
ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ
ಈ ವೇಳೆ ಶ್ರೀಲಂಕಾಗೆ ತೆರಳಿದ್ದ ಸಿ.ಆರ್ ಮನೋಹರ್ ತಾಜ್ ಹೋಟೆಲ್ ನಲ್ಲಿ ತಂಗಿದ್ದರು. ಅದೇ ಹೋಟೆಲ್ ಪಕ್ಕಾ ಬಾಂಬ್ ಬ್ಲಾಸ್ ಆಗಿದೆ. ಇದರಿಂದ ಸಹಜವಾಗಿ ಆತಂಕಗೊಂಡ ಸಿ.ಆರ್ ಮನೋಹರ್ ಅವರು ನಿನ್ನೆ ಸಂಜೆ ಭಾರತಕ್ಕೆ ವಾಪಸ್ ಆಗಿದ್ದಾರೆ.
ಮತ್ತೊಂದೆಡೆ ಬಾಂಬ್ ಸ್ಫೋಟದಿಂದ ತಮಿಳು ನಟಿ ರಾಧಿಕಾ ಶರತ್ ಕುಮಾರ್ ಕೂಡ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಸಿನ್ನಮೋನ್ ಹೋಟೆಲ್ ನಲ್ಲಿದ್ದ ರಾಧಿಕಾ, ಅಲ್ಲಿಂದ ಹೊರಗೆ ಹೋದ ಕೆಲವೇ ಸಮಯದಲ್ಲಿ ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ರಾಧಿಕಾ ಪಾರಾಗಿದ್ದಾರೆ.
ಶ್ರೀಲಂಕಾ ಬಾಂಬ್ ಸ್ಫೋಟದಿಂದ ನಟಿ ರಾಧಿಕಾ ಗ್ರೇಟ್ ಎಸ್ಕೇಪ್
ಸಿ ಆರ್ ಮನೋಹರ್ ಅವರು ವಿಧಾನಪರಿಷತ್ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕ. ಸುದೀಪ್ ಮತ್ತು ಶಿವರಾಜ್ ಕುಮಾರ್ ಅಭಿನಯಿಸಿದ್ದ 'ದಿ ವಿಲನ್' ಸಿನಿಮಾವನ್ನ ಕೊನೆಯದಾಗಿ ನಿರ್ಮಾಣ ಮಾಡಿದ್ದರು.